AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇನ್ ಡೆಡ್ ಆದ ಮಹಿಳೆ 3 ಜನರ ಜೀವ ಉಳಿಸಿದಳು; ಮನಮಿಡಿಯುವ ಕಥೆಯಿದು

Viral News: 2019ರಲ್ಲಿ 700 ಕ್ಕೂ ಹೆಚ್ಚು ಕುಟುಂಬಗಳು ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಲು ಮುಂದಾಗಿವೆ. ಕೊವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದಾದ್ಯಂತ ಅಂಗಾಂಗ ದಾನದಲ್ಲಿ ಶೇ. 70ರಷ್ಟು ಕುಸಿತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬ್ರೇನ್ ಡೆಡ್ ಆದ ಮಹಿಳೆ 3 ಜನರ ಜೀವ ಉಳಿಸಿದಳು; ಮನಮಿಡಿಯುವ ಕಥೆಯಿದು
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on:Sep 23, 2021 | 11:32 AM

ಗುರಗಾಂವ್​ನ 44 ವರ್ಷದ ಮಹಿಳೆ ಬುಧವಾರ ಮೂವರಿಗೆ ಹೊಸ ಬದುಕನ್ನು ನಿಡಿದ್ದಾರೆ. ಮಹಿಳೆಗೆ ಬ್ರೇನ್ ಡೆಡ್ ಆಗಿದೆ ಎಂಬ ವಿಷಯ ತಿಳಿದ ನಂತರ ಮನೆಯವರು ಆಕೆಯ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಮಹಿಳೆಯ ಯಕೃತ್ತು ಮತ್ತು ಮೂತ್ರಪಿಂಡವನ್ನು ಕಸಿ ಮಾಡಿದ ನಂತರ ಮೂವರು ಹೊಸ ಬದುಕನ್ನು ಕಂಡುಕೊಂಡಿದ್ದಾರೆ. ಪ್ರಸ್ತುತ ಕೊವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆಗಳು ಕುಸಿಯುತ್ತಿರುವ ಈ ಸಮಯದಲ್ಲಿ ಪ್ರಗತಿಯ ಹೆಜ್ಜೆ ಎಂದು ವೈದ್ಯರು ಮಾತನಾಡಿದ್ದಾರೆ. ಈ ಕುರಿತಾದ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಸೆಪ್ಟೆಂಬರ್ 15ರ ರಾತ್ರಿ ಗುರುಗಾಂವ್​ನ ಫೋರ್ಟಿಸ್ ಮೆಮೊರಿಯಲ್ ರಿಸರ್ಚ್ ಇನ್ಸ್ಟಿಟ್ಯೂಟ್​ಗೆ (ಎಫ್ಎಂಆರ್​ಐ​) ದಾಖಲಾಗಿದ್ದ ಮಹಿಳೆಯ ಬ್ರೇನ್ ಡೆಡ್ ಆಗಿದೆ ಎಂದು ವೈದ್ಯರ ಪರಿಶೀಲನೆಯ ನಂತರ ತಿಳಿದು ಬಂದಿದೆ. ಆಕೆಯ ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಪರಿಣಾಮ ಬ್ರೇನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಅಂಗಾಂಗಳಿಂದ ಬೇರೆಯವರಿಗೆ ಬದುಕಲು ಅವಕಾಶ ಮಾಡಿಕೊಡಲು ಮನೆಯವರು ನಿರ್ಧರಿಸಿ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆ ನೀಡಿದ್ದಾರೆ.

ರೋಗಿಯ ಕುಟುಂಬದವರು ಆಕೆಯ ಅಂಗಾಂಗಳನ್ನು ದಾನ ಮಾಡಲು ಒಪ್ಪಿದರು. ಗುರಗಾಂವ್​ನಲ್ಲಿ 38 ವರ್ಷದ ಮಹಿಳೆಗೆ ಮೂತ್ರಪಿಂಡ ಮತ್ತು 52 ವರ್ಷದ ಮಹಿಳೆಗೆ ಯಕೃತ್ತು ಅಂಗವನ್ನು ಕಸಿ ಮಾಡಲಾಗಿದೆ. ಎರಡನೇ ಮೂತ್ರಪಿಂಡವನ್ನು ದೆಹಲಿಯಲ್ಲಿ 43 ವರ್ಷದ ಮಹಿಳೆಗೆ ಕಸಿ ಮಾಡಲಾಯಿತು ಎಂಬ ಮಾಹಿತಿ ತಿಳಿದು ಬಂದಿದೆ.

2019ರಲ್ಲಿ 700 ಕ್ಕೂ ಹೆಚ್ಚು ಕುಟುಂಬಗಳು ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಲು ಮುಂದಾಗಿವೆ. ಕೊವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದಾದ್ಯಂತ ಅಂಗಾಂಗ ದಾನದಲ್ಲಿ ಶೇ. 70ರಷ್ಟು ಕುಸಿತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:

World Organ Donation Day 2021: ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತೇನೆ, ನೀವೂ ಹಾಕಿ – ಸಿಎಂ ಬೊಮ್ಮಾಯಿ

(Doctor declared brain dead gurgaon woman donating kidney liver and saves three lives viral news)

Published On - 11:29 am, Thu, 23 September 21

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್