AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್