AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ