AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ