AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ