AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​

German Shephard: ನಾಯಿಗಳು ಅತೀ ಸೂಕ್ಷ್ಮ ಸಂವೇದನೆಯುಳ್ಳ ಪ್ರಾಣಿಗಳು. ಇನ್ನೊಂದು ನಾಯಿ ದಾಳಿ ಮಾಡುವ ಮೂಡ್​ನಲ್ಲಿದೆ ಎನ್ನುವುದನ್ನು ಸೆಕೆಂಡುಗಳ ವೇಗದಲ್ಲಿ ಅರ್ಥ ಮಾಡಿಕೊಂಡು ರಕ್ಷಣೆಗೆ ಸನ್ನದ್ಧರಾಗುತ್ತವೆ. ನೋಡಿ ಈ ವಿಡಿಯೋ.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​
ಅಣ್ಣನನ್ನು ರಕ್ಷಿಸುತ್ತಿರುವ ಜರ್ಮನ್ ಶೆಫರ್ಡ್​
TV9 Web
| Edited By: |

Updated on:Dec 27, 2022 | 10:57 AM

Share

Viral Video: ತನ್ನ ಅಣ್ಣನೊಂದಿಗೆ ಈ ಜರ್ಮನ್​ ಶೆಫರ್​ ವಾಕಿಂಗ್​ ಬಂದಿದೆ. ಆದರೆ ವಾಕಿಂಗ್​ ಬಂದ ಇನ್ನೊಂದು ನಾಯಿಯು ಇದ್ದಕ್ಕಿದ್ದ ಹಾಗೆ ತನ್ನ ಪೋಷಕನಿಂದ ತಪ್ಪಿಸಿಕೊಂಡು ಬಂದು ಅಣ್ಣನ ಮೇಲೆ ದಾಳಿ ಮಾಡಲು ನೋಡಿದೆ. ಆಗ ಜರ್ಮನ್​ ಶೆಫರ್ಡ್​ ಶರವೇಗದಲ್ಲಿ ಅಣ್ಣನನ್ನು ತಳ್ಳಿ ಆ ನಾಯಿಯೊಂದಿಗೆ ಕಾದಾಡಿ ಅಣ್ಣನನ್ನು ರಕ್ಷಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಜರ್ಮನ್ ಶೆಫರ್ಡ್​ಗೆ ಶಭಾಷ್​ ಹೇಳುತ್ತಿದ್ದಾರೆ.

ಜರ್ಮನ್ ಶೆಫರ್ಡ್​ಗೆ ಅದೆಷ್ಟು ಬೇಗ ಅರ್ಥವಾಗುತ್ತದೆ ನೋಡಿ ಆ ನಾಯಿಯ ನಡೆವಳಿಕೆ ದಾಳಿಯ ಉದ್ದೇಶದಿಂದ ಕೂಡಿದೆ ಎಂದು.  ಹೇಗೆ ಅವನ ಮೇಲೆ ಬಿದ್ದು ಅವನನ್ನು ರಕ್ಷಿಸುತ್ತದೆ. ಎಲ್ಲವೂ ಸೆಕೆಂಡುಗಳ ಲೆಕ್ಕದಲ್ಲಿ ನಡೆದುಹೋಗುತ್ತದೆ. ಪಾಸಿಟಿವ್ ನ್ಯೂಸ್​ ಎಂಬ ಇನ್​ಸ್ಟಾಗ್ರಾಂ ಪುಟವು ಈ ವಿಡಿಯೋ ಅನ್ನು ಹಂಚಿಕೊಂಡಿದೆ. ಈ ಲೀಡರ್​ಗೆ ಸನ್ಮಾನ ಮಾಡಬೇಕು ಎಂದಿದ್ದಾರೆ ಕೆಲವರು. 2.8 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 16,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ : ವಿಮಾನ ನಿಲ್ದಾಣದ ಸ್ಕ್ಯಾನಿಂಗ್​ ಮಶೀನಿನಲ್ಲಿ ಪತ್ತೆಯಾದ ನಾಯಿ; ನೆಟ್ಟಿಗರ ಆಕ್ರೋಶ

ಜರ್ಮನ್ ಶೆಫರ್ಡ್​ ನಿಷ್ಠೆಗೆ ಹೆಸರಾದ ತಳಿ ಎಂದಿದ್ದಾರೆ ಕೆಲವರು. ಪಡೆದ ಪ್ರೀತಿಯನ್ನು ಹೀಗೆ ಸಕಾಲದಲ್ಲಿ ಹಿಂದಿರುಗಿಸುತ್ತವೆ ಈ ನಾಯಿಗಳು ಎಂದಿದ್ದಾರೆ ಒಬ್ಬರು. ಸದ್ಯ ಈ ನಾಯಿ ಅಲ್ಲಿದ್ದು ರಕ್ಷಿಸಿತಲ್ಲ ಆ ಹುಡುಗನನ್ನು ಎಂದಿದ್ದಾರೆ ಹಲವರು. ದೇವರು ಒಳ್ಳೆಯದನ್ನು ಮಾಡಲಿ ಈ ನಾಯಿಗೆ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:07 am, Tue, 27 December 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ