AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೊಟ್ಟ ಮೊದಲ ಬಾರಿಗೆ ಹಂಗೇರಿ-ರೊಮೇನಿಯಾ ಗಡಿಯನ್ನು ದಾಟಿದ ಬೀದಿ ನಾಯಿ; ಹೃದಯಸ್ಪರ್ಶಿ ವಿಡಿಯೋ ವೈರಲ್‌

ಯುರೋಪಿಯನ್ ಏಕೀಕರಣದ ಭಾಗವಾಗಿ, ಬಲ್ಗೇರಿಯಾ ಮತ್ತು ರೊಮೇನಿಯಾ ಅಧಿಕೃತವಾಗಿ ಷೆಂಗೆನ್‌ ವಲಯಕ್ಕೆ ಸೇರಿದೆ. ಇನ್ನೂ ರೊಮೇನಿಯಾ-ಹಂಗೇರಿ ಗಡಿ ಭಾಗದಲ್ಲಿ ಹೊಸದಾಗ ಚೆಕ್‌ಪಾಯಿಂಟ್‌ ಅನ್ನು ತೆರೆಯಲಾಗಿದೆ. ಇಲ್ಲಿನ ಅಧಿಕಾರಿಗಳು ಮೊದಲ ಬಾರಿಗೆ ಚೆಕ್‌ಪಾಯಿಂಟ್‌ನ ತಡೆಬೇಲಿಯನ್ನು ತೆರೆಯುತ್ತಿದ್ದಂತೆ ಬೀದಿ ನಾಯಿಯೊಂದು ಹಂಗೇರಿಯಿಂದ ರೊಮೇನಿಯಾ ಕಡೆಗೆ ಹೋಗಿದ್ದು, ಇದೀಗ ಈ ಶ್ವಾನ ಹಂಗೇರಿ-ರೊಮೇನಿಯಾ ಗಡಿ ದಾಟಿದ ಮೊದಲ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 07, 2025 | 5:14 PM

Share

ಯುರೋಪಿಯನ್‌ ಏಕೀಕರಣದ ಭಾಗವಾಗಿ ಬಲ್ಗೇರಿಯಾ ಮತ್ತು ರೊಮೇನಿಯಾ ಅಂತಿಮವಾಗಿ ತಮ್ಮ ಗಡಿ ಪರಿಶೀಲನೆಗಳನ್ನು ತ್ಯಜಿಸಿ ಅಧೀಕೃತವಾಗಿ ಷೆಂಗೆನ್‌ ವಲಯಕ್ಕೆ ಸೇರಿದೆ. ಇದಾದ ಬಳಿಕ ರೊಮೇನಿಯಾ-ಹಂಗೇರಿ ಗಡಿ ಭಾಗದಲ್ಲಿ ಹೊಸದಾಗ ಚೆಕ್‌ಪಾಯಿಂಟ್‌ ಅನ್ನು ತೆರೆಯಲಾಗಿದ್ದು, ಈ ಎರಡು ದೇಶಗಳ ನಡುವಿನ ಕ್ರಾಸಿಂಗ್‌ಗಳನ್ನು ತೆರೆವು ಐತಿಹಾಸಿಕ ಕ್ಷಣವನ್ನು ಆಚರಿಸಲು ಅಧಿಕಾರಿಗಳು ಒಟ್ಟುಗೂಡಿದ್ದ ಸಂದರ್ಭದಲ್ಲಿ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ಹೌದು ಎರಡೂ ದೇಶದ ಅಧಿಕಾರಿಗಳು ಅಧೀಕೃತವಾಗಿ ಹೊಸದಾಗಿ ನಿರ್ಮಿಸಿದ ತಡೆ ಬೇಲಿಯನ್ನು ತೆರೆದಾಗ ಬೀದಿನಾಯಿಯೊಂದು ಹಂಗೇರಿ-ರೊಮೇನಿಯಾ ಗಡಿಯನ್ನು ದಾಟಿದ್ದು, ಇದೀಗ ಈ ಶ್ವಾನ ಗಡಿ ದಾಟಿದ ಮೊದಲ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹೃದಯಸ್ಪರ್ಶಿ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ.

ಜನವರಿ 1, 2024 ರಂದು ರೊಮೇನಿಯಾ ಯುರೋಪಿಯನ್‌ ಒಕ್ಕೂಟದ ಷೆಂಗೆನ್‌ ಪ್ರದೇಶವನ್ನು ಸೇರಿದ್ದು, ಬಲ್ಗೇರಿಯಾ ಮತ್ತು ರೊಮೇನಿಯಾದ ನಾಗರಿಕರು ಇನ್ನು ಮುಂದೆ ಗಡಿ ತಪಾಸಣೆಯಿಲ್ಲದೆ ಷೆಂಗೆನ್‌ಗೆ ಪ್ರಯಾಣಿಸಬಹುದು ಎಂದು ಹೇಳಿದೆ. ಇದರ ನಂತರ ಗಡಿಭಾಗದ ಚೆಕ್ ಪೋಸ್ಟ್‌ಗಳಲ್ಲಿ ಎಲ್ಲಾ ತಪಾಸಣೆಗಳನ್ನು ನಿಲ್ಲಿಸಲಾಗಿದ್ದು, ಹೊಸದಾಗಿ ರೊಮೇನಿಯಾ-ಹಂಗೇರಿ ಗಡಿ ಭಾಗದಲ್ಲಿ ಚೆಕ್ ಪಾಯಿಂಟ್‌ ಅನ್ನು ಸ್ಥಾಪಿಸಲಾಗಿದೆ. ಈ ಗಡಿ ತೆರೆಯುವ ಖುಷಿಯ ಕ್ಷಣವನ್ನು ಆಚರಿಸಲು ರೊಮೇನಿಯಾ ಮತ್ತು ಹಂಗೇರಿಯ ಅಧಿಕಾರಿಗಳು ತಮ್ಮ ತಮ್ಮ ದೇಶದ ಧ್ವಜ ಹಿಡಿದು ನಿಂತಿದ್ದ ಸಂದರ್ಭದಲ್ಲಿ ಬೀದಿ ನಾಯಿಯೊಂದು ರೊಮೇನಿಯಾ-ಹಂಗೇರಿ ಗಡಿ ದಾಟಿದೆ. ಈ ಕ್ಷಣವನ್ನು ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದ್ದಾರೆ.

Collin Rugg ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬೀದಿ ನಾಯಿಯೊಂದು ಮೊಟ್ಟ ಮೊದಲ ಬಾರಿಗೆ ಹಂಗೇರಿ-ರೊಮೇನಿಯಾ ಗಟಿ ದಾಟುತ್ತಿರುವ ಸುಂದರ ದೃಶ್ಯವನ್ನು ಕಾಣಬಹುದು. ಚೆಕ್‌ ಪಾಯಿಂಟ್‌ ಬಳಿ ತಡೆ ಬೇಲಿಯನ್ನು ತೆರೆಯುತ್ತಿದ್ದಂತೆ ಬೀದಿನಾಯಿಯೊಂದು ಹಂಗೇರಿಯಿಂದ ರೊಮೇನಿಯಾಗೆ ಕಾಲಿಟ್ಟಿದೆ. ಈ ವಿಶೇಷ ಅತಿಥಿ ಮೊದಲ ಬಾರಿಗೆ ಗಡಿ ದಾಟಿದ ಕ್ಷಣವನ್ನು ಅಧಿಕಾರಿಗಳು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಮೃಗಾಲಯದೊಳಕ್ಕೆ ಬಿದ್ದ ಮಗುವಿನ ಪಾದರಕ್ಷೆಯನ್ನು ವಾಪಸ್‌ ಕೊಟ್ಟ ಆನೆ; ಮುದ್ದಾದ ವಿಡಿಯೋ ವೈರಲ್‌

ಜನವರಿ 05 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯ ತುಂಬಾನೇ ಮುದ್ದಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆ ನಾಯಿಯನ್ನು ಯಾರಾದರೂ ದತ್ತು ತೆಗೆದುಕೊಳ್ಳಬಹುದಿತ್ತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?