AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

350 ಜನರನ್ನು ಆಹ್ವಾನಿಸಿ ನಾಯಿಯ ಹುಟ್ಟುಹಬ್ಬ ಮಾಡಿದ ಧನಬಾದ್​ನ ದಂಪತಿ

Viral Video : ಈ ನಾಯಿಯ ಹುಟ್ಟುಹಬ್ಬಕ್ಕೆ ಆಮಂತ್ರಣ ಪತ್ರಿಕೆ ಮುದ್ರಿಸಲಾಯಿತು. ರೂ. 4,500 ವೆಚ್ಚದಲ್ಲಿ ಸೂಟ್​ ಖರೀದಿಸಲಾಯಿತು. ಬಂಧುಗಳು ಚಿನ್ನದ ಲಾಕೆಟ್​ ಉಡುಗೊರೆ ಕೊಟ್ಟರು.

350 ಜನರನ್ನು ಆಹ್ವಾನಿಸಿ ನಾಯಿಯ ಹುಟ್ಟುಹಬ್ಬ ಮಾಡಿದ ಧನಬಾದ್​ನ ದಂಪತಿ
ಧನಬಾದ್​ನಲ್ಲಿ ನಾಯಿಯ ಹುಟ್ಟುಹಬ್ಬ ಆಚರಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Dec 03, 2022 | 8:59 AM

Share

Viral Video : ಈಗೀಗ ಸಾಕುಪ್ರಾಣಿಗಳೆಂದರೆ ಸ್ವಂತ ಮಕ್ಕಳಂತೆಯೇ ನೋಡಿಕೊಳ್ಳುತ್ತಿರುವವರ ಟ್ರೆಂಡ್ ಜಾಸ್ತಿಯಾಗುತ್ತಿದೆ. ಇದು ಪೋಷಣೆಗೆ ಮಾತ್ರ ಸೀಮಿತವಾಗದೆ ಸಂಭ್ರಮ, ಆಚರಣೆಗೂ ವಿಸ್ತರಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಾಕುಪ್ರಾಣಿಗಳಿಗೆಂದೇ ಪ್ರತ್ಯೇಕ ಅಕೌಂಟ್​ ಮಾಡಿ ಅವುಗಳ ಜೀವನಶೈಲಿಯ ಬಗ್ಗೆ ಅಪ್​ಡೇಟ್​ ಮಾಡುವಲ್ಲಿ ಜನ ನಿರತರಾಗಿರುತ್ತಾರೆ. ಇತ್ತೀಚೆಗೆ ಗುರಗ್ರಾಂನಲ್ಲಿ ನಾಯಿಗಳ ಮದುವೆ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದಿರಿ. ಇದೀಗ ಈ ದಂಪತಿ ತಮ್ಮ ಸಾಕುನಾಯಿಯ ಹುಟ್ಟುಹಬ್ಬಕ್ಕೆ 350 ಜನರನ್ನು ಆಹ್ವಾನಿಸಿ ದೊಡ್ಡದಾದ ಕೇಕ್ ಕಟ್​ ಮಾಡಿ ಸಂಭ್ರಮಿಸಿದ್ದಾರೆ.

ಲೋಯಾಬಾದ್​ನಲ್ಲಿ ವಾಸವಾಗಿರುವ ಈ ಕುಟುಂಬಕ್ಕೆ ಸಾಕುನಾಯಿ ಅಕ್ಸರ್ ಎಂದರೆ ಪ್ರಾಣ. ಇದರ ಹುಟ್ಟುಹಬ್ಬವನ್ನು ವೈಭದಿಂದ ಆಚರಿಸಬೇಕೆಂದು ಇವರು ಯೋಚಿಸಿ ಹುಟ್ಟುಹಬ್ಬಕ್ಕಾಗಿ ಆಮಂತ್ರಣ ಪತ್ರಿಕೆಯನ್ನೂ ಪ್ರಿಂಟ್ ಮಾಡಿಸಿದರು. ರೂ. 4,500 ಕೊಟ್ಟು ನಾಯಿಗೆ ಸೂಟ್​ ಅನ್ನೂ ಖರೀದಿಸಿದರು. ದೊಡ್ಡದಾದ ಕೇಕ್ ಮತ್ತು 350 ಅತಿಥಿಗಳೊಂದಿಗೆ ಅಕ್ಸರ್​ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಬಂಗಾಳದ ಶ್ರೀಪುರದಿಂದ ಬಂಧು ಬಳಗದವರು ಆಗಮನಿಸಿದ್ದರು. ನಾಯಿಗೆ ಚಿನ್ನದ ಪದಕವನ್ನು ಉಡುಗೊರೆಯಾಗಿ ಕೊಟ್ಟರು. ಬಂದವರೆಲ್ಲ ಒಂದಿಲ್ಲಾ ಒಂದು ಉಡುಗೊರೆ ನೀಡಿ ಸಂತೋಷಪಟ್ಟರು.

ಇದನ್ನೂ ಓದಿ  : ನಾಯಿಯ ಹುಟ್ಟುಹಬ್ಬ ಆಚರಿಸಿದ ಮಕ್ಕಳು; ವೈರಲ್ ವಿಡಿಯೋ

ಈ ನಾಯಿಯ ಪೋಷಕರು ಸುಮಿತ್ರಾ ಕುಮಾರಿ ಮತ್ತು ಸಂದೀಪ್​ ಕುಮಾರಿ. ಇವು ನಾಯಿಯನ್ನು ಮಗುವಿನಂತೆಯೇ ಪ್ರೀತಿಸುತ್ತಾರೆ. ಅದರೊಂದಿಗೆ ಊಟ ಮಾಡುತ್ತಾರೆ ಮತ್ತು ಮಲಗುತ್ತಾರೆ ಕೂಡ. ‘ನಾನು ಪಂಜಾಬ್​ನಲ್ಲಿ ವಾಸವಾಗಿದ್ದಾಗ ಅಲ್ಲಿಯ ಜನರು ನಾಯಿಗಳನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂಬುದನ್ನು ಸ್ವತಃ ಗಮನಿಸುತ್ತಿದ್ದೆ. ಅವರು ನಡೆಸಿಕೊಳ್ಳುವ ರೀತಿ ಬೇಸರ ತರಿಸುವಂತಿತ್ತು. ಈ ಊರಿಗೆ ಬಂದ ಮೇಲೆ ಬೀದಿಬದಿಯಲ್ಲಿದ್ದ 20 ದಿನದ ನಾಯಿಮರಿಯನ್ನು ತಂದು ಸಾಕಿದೆವು. ಈಗ ಇದರ ಹುಟ್ಟುಹಬ್ಬವನ್ನು ಆಚರಿಸಿ ಖುಷಿಪಟ್ಟೆವು ಎಂದಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 8:59 am, Sat, 3 December 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?