AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

350 ಜನರನ್ನು ಆಹ್ವಾನಿಸಿ ನಾಯಿಯ ಹುಟ್ಟುಹಬ್ಬ ಮಾಡಿದ ಧನಬಾದ್​ನ ದಂಪತಿ

Viral Video : ಈ ನಾಯಿಯ ಹುಟ್ಟುಹಬ್ಬಕ್ಕೆ ಆಮಂತ್ರಣ ಪತ್ರಿಕೆ ಮುದ್ರಿಸಲಾಯಿತು. ರೂ. 4,500 ವೆಚ್ಚದಲ್ಲಿ ಸೂಟ್​ ಖರೀದಿಸಲಾಯಿತು. ಬಂಧುಗಳು ಚಿನ್ನದ ಲಾಕೆಟ್​ ಉಡುಗೊರೆ ಕೊಟ್ಟರು.

350 ಜನರನ್ನು ಆಹ್ವಾನಿಸಿ ನಾಯಿಯ ಹುಟ್ಟುಹಬ್ಬ ಮಾಡಿದ ಧನಬಾದ್​ನ ದಂಪತಿ
ಧನಬಾದ್​ನಲ್ಲಿ ನಾಯಿಯ ಹುಟ್ಟುಹಬ್ಬ ಆಚರಿಸುತ್ತಿರುವುದು
TV9 Web
| Edited By: |

Updated on:Dec 03, 2022 | 8:59 AM

Share

Viral Video : ಈಗೀಗ ಸಾಕುಪ್ರಾಣಿಗಳೆಂದರೆ ಸ್ವಂತ ಮಕ್ಕಳಂತೆಯೇ ನೋಡಿಕೊಳ್ಳುತ್ತಿರುವವರ ಟ್ರೆಂಡ್ ಜಾಸ್ತಿಯಾಗುತ್ತಿದೆ. ಇದು ಪೋಷಣೆಗೆ ಮಾತ್ರ ಸೀಮಿತವಾಗದೆ ಸಂಭ್ರಮ, ಆಚರಣೆಗೂ ವಿಸ್ತರಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಾಕುಪ್ರಾಣಿಗಳಿಗೆಂದೇ ಪ್ರತ್ಯೇಕ ಅಕೌಂಟ್​ ಮಾಡಿ ಅವುಗಳ ಜೀವನಶೈಲಿಯ ಬಗ್ಗೆ ಅಪ್​ಡೇಟ್​ ಮಾಡುವಲ್ಲಿ ಜನ ನಿರತರಾಗಿರುತ್ತಾರೆ. ಇತ್ತೀಚೆಗೆ ಗುರಗ್ರಾಂನಲ್ಲಿ ನಾಯಿಗಳ ಮದುವೆ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದಿರಿ. ಇದೀಗ ಈ ದಂಪತಿ ತಮ್ಮ ಸಾಕುನಾಯಿಯ ಹುಟ್ಟುಹಬ್ಬಕ್ಕೆ 350 ಜನರನ್ನು ಆಹ್ವಾನಿಸಿ ದೊಡ್ಡದಾದ ಕೇಕ್ ಕಟ್​ ಮಾಡಿ ಸಂಭ್ರಮಿಸಿದ್ದಾರೆ.

ಲೋಯಾಬಾದ್​ನಲ್ಲಿ ವಾಸವಾಗಿರುವ ಈ ಕುಟುಂಬಕ್ಕೆ ಸಾಕುನಾಯಿ ಅಕ್ಸರ್ ಎಂದರೆ ಪ್ರಾಣ. ಇದರ ಹುಟ್ಟುಹಬ್ಬವನ್ನು ವೈಭದಿಂದ ಆಚರಿಸಬೇಕೆಂದು ಇವರು ಯೋಚಿಸಿ ಹುಟ್ಟುಹಬ್ಬಕ್ಕಾಗಿ ಆಮಂತ್ರಣ ಪತ್ರಿಕೆಯನ್ನೂ ಪ್ರಿಂಟ್ ಮಾಡಿಸಿದರು. ರೂ. 4,500 ಕೊಟ್ಟು ನಾಯಿಗೆ ಸೂಟ್​ ಅನ್ನೂ ಖರೀದಿಸಿದರು. ದೊಡ್ಡದಾದ ಕೇಕ್ ಮತ್ತು 350 ಅತಿಥಿಗಳೊಂದಿಗೆ ಅಕ್ಸರ್​ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಬಂಗಾಳದ ಶ್ರೀಪುರದಿಂದ ಬಂಧು ಬಳಗದವರು ಆಗಮನಿಸಿದ್ದರು. ನಾಯಿಗೆ ಚಿನ್ನದ ಪದಕವನ್ನು ಉಡುಗೊರೆಯಾಗಿ ಕೊಟ್ಟರು. ಬಂದವರೆಲ್ಲ ಒಂದಿಲ್ಲಾ ಒಂದು ಉಡುಗೊರೆ ನೀಡಿ ಸಂತೋಷಪಟ್ಟರು.

ಇದನ್ನೂ ಓದಿ  : ನಾಯಿಯ ಹುಟ್ಟುಹಬ್ಬ ಆಚರಿಸಿದ ಮಕ್ಕಳು; ವೈರಲ್ ವಿಡಿಯೋ

ಈ ನಾಯಿಯ ಪೋಷಕರು ಸುಮಿತ್ರಾ ಕುಮಾರಿ ಮತ್ತು ಸಂದೀಪ್​ ಕುಮಾರಿ. ಇವು ನಾಯಿಯನ್ನು ಮಗುವಿನಂತೆಯೇ ಪ್ರೀತಿಸುತ್ತಾರೆ. ಅದರೊಂದಿಗೆ ಊಟ ಮಾಡುತ್ತಾರೆ ಮತ್ತು ಮಲಗುತ್ತಾರೆ ಕೂಡ. ‘ನಾನು ಪಂಜಾಬ್​ನಲ್ಲಿ ವಾಸವಾಗಿದ್ದಾಗ ಅಲ್ಲಿಯ ಜನರು ನಾಯಿಗಳನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂಬುದನ್ನು ಸ್ವತಃ ಗಮನಿಸುತ್ತಿದ್ದೆ. ಅವರು ನಡೆಸಿಕೊಳ್ಳುವ ರೀತಿ ಬೇಸರ ತರಿಸುವಂತಿತ್ತು. ಈ ಊರಿಗೆ ಬಂದ ಮೇಲೆ ಬೀದಿಬದಿಯಲ್ಲಿದ್ದ 20 ದಿನದ ನಾಯಿಮರಿಯನ್ನು ತಂದು ಸಾಕಿದೆವು. ಈಗ ಇದರ ಹುಟ್ಟುಹಬ್ಬವನ್ನು ಆಚರಿಸಿ ಖುಷಿಪಟ್ಟೆವು ಎಂದಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 8:59 am, Sat, 3 December 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​