AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!
Dog Heart Surgery
ಅಕ್ಷತಾ ವರ್ಕಾಡಿ
|

Updated on: Jun 03, 2024 | 3:32 PM

Share

ಹೃದಯದ  ಕಾಯಿಲೆಯಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ದೆಹಲಿಯ ಪಶುವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಭಾರತದಲ್ಲಿ ಅಲ್ಲದೇ ಇಡೀ ಏಷ್ಯಾದಲ್ಲೇ ನಾಯಿಯೊಂದಕ್ಕೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವುದು ಇದೇ ಮೊದಲು ಎಂದು ಪಶುವೈದ್ಯರು ಜೂಲಿಯೆಟ್‌ಗೆ ದೆಹಲಿಯ ಮ್ಯಾಕ್ಸ್ ಪೆಟ್ಜ್ ಆಸ್ಪತ್ರೆಯ ಡಾ. ಭಾನು ದೇವ್​​ ಶರ್ಮಾ ಹೇಳಿದ್ದಾರೆ. 7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

ಮೇ 30 ರಂದು ಟ್ರಾನ್ಸ್‌ಕ್ಯಾಥೆಟರ್ ಎಡ್ಜ್-ಟು-ಎಡ್ಜ್ ಶಸ್ತ್ರಚಿಕಿತ್ಸೆ ನಡೆದಿದೆ. ಇದು ಹೈಬ್ರಿಡ್ ಶಸ್ತ್ರಚಿಕಿತ್ಸೆಯಾಗಿದ್ದು, ಈ ಶಸ್ತ್ರಚಿಕಿತ್ಸೆಯಲ್ಲಿ, ದೇಹದಲ್ಲಿ ಗಾಯ ಮಾಡದೆಯೇ ರಕ್ತನಾಳದ ಮೂಲಕ ಉಪಕರಣವನ್ನು ಹಾದುಹೋಗುವ ಮೂಲಕ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಮೇ. 30 ರಂದು ಈ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎರಡು ದಿನಗಳ ನಂತರ ನಾಯಿಯನ್ನು ಡಿಸ್ಚಾರ್ಜ್​​​ ಮಾಡಲಾಗಿದೆ. ನಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ಏಷ್ಯಾದಲ್ಲಿ ಮೊದಲ ಬಾರಿಗೆ. ಇದು ವಿಶ್ವದಲ್ಲೇ ಎರಡನೆಯದು ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ಮಿಟ್ರಲ್ ವಾಲ್ವ್ ಕಾಯಿಲೆಯು ಭಾರತದಲ್ಲಿ ಮತ್ತು ಪ್ರಪಂಚದ ಇತರ ಭಾಗಗಳಲ್ಲಿ ನಾಯಿಗಳಲ್ಲಿ ಅತ್ಯಂತ ಸಾಮಾನ್ಯವಾದ ಹೃದಯ ಕಾಯಿಲೆಯಾಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವ ನಾಯಿಗಳು ಸಾಯುವ ಅಪಾಯ ಹೆಚ್ಚು ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ