AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!
Dog Heart Surgery
ಅಕ್ಷತಾ ವರ್ಕಾಡಿ
|

Updated on: Jun 03, 2024 | 3:32 PM

Share

ಹೃದಯದ  ಕಾಯಿಲೆಯಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ದೆಹಲಿಯ ಪಶುವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಭಾರತದಲ್ಲಿ ಅಲ್ಲದೇ ಇಡೀ ಏಷ್ಯಾದಲ್ಲೇ ನಾಯಿಯೊಂದಕ್ಕೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವುದು ಇದೇ ಮೊದಲು ಎಂದು ಪಶುವೈದ್ಯರು ಜೂಲಿಯೆಟ್‌ಗೆ ದೆಹಲಿಯ ಮ್ಯಾಕ್ಸ್ ಪೆಟ್ಜ್ ಆಸ್ಪತ್ರೆಯ ಡಾ. ಭಾನು ದೇವ್​​ ಶರ್ಮಾ ಹೇಳಿದ್ದಾರೆ. 7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

ಮೇ 30 ರಂದು ಟ್ರಾನ್ಸ್‌ಕ್ಯಾಥೆಟರ್ ಎಡ್ಜ್-ಟು-ಎಡ್ಜ್ ಶಸ್ತ್ರಚಿಕಿತ್ಸೆ ನಡೆದಿದೆ. ಇದು ಹೈಬ್ರಿಡ್ ಶಸ್ತ್ರಚಿಕಿತ್ಸೆಯಾಗಿದ್ದು, ಈ ಶಸ್ತ್ರಚಿಕಿತ್ಸೆಯಲ್ಲಿ, ದೇಹದಲ್ಲಿ ಗಾಯ ಮಾಡದೆಯೇ ರಕ್ತನಾಳದ ಮೂಲಕ ಉಪಕರಣವನ್ನು ಹಾದುಹೋಗುವ ಮೂಲಕ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಮೇ. 30 ರಂದು ಈ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎರಡು ದಿನಗಳ ನಂತರ ನಾಯಿಯನ್ನು ಡಿಸ್ಚಾರ್ಜ್​​​ ಮಾಡಲಾಗಿದೆ. ನಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ಏಷ್ಯಾದಲ್ಲಿ ಮೊದಲ ಬಾರಿಗೆ. ಇದು ವಿಶ್ವದಲ್ಲೇ ಎರಡನೆಯದು ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ಮಿಟ್ರಲ್ ವಾಲ್ವ್ ಕಾಯಿಲೆಯು ಭಾರತದಲ್ಲಿ ಮತ್ತು ಪ್ರಪಂಚದ ಇತರ ಭಾಗಗಳಲ್ಲಿ ನಾಯಿಗಳಲ್ಲಿ ಅತ್ಯಂತ ಸಾಮಾನ್ಯವಾದ ಹೃದಯ ಕಾಯಿಲೆಯಾಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವ ನಾಯಿಗಳು ಸಾಯುವ ಅಪಾಯ ಹೆಚ್ಚು ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ