AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

Dog Heart Surgery: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!
Dog Heart Surgery
ಅಕ್ಷತಾ ವರ್ಕಾಡಿ
|

Updated on: Jun 03, 2024 | 3:32 PM

Share

ಹೃದಯದ  ಕಾಯಿಲೆಯಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ದೆಹಲಿಯ ಪಶುವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಭಾರತದಲ್ಲಿ ಅಲ್ಲದೇ ಇಡೀ ಏಷ್ಯಾದಲ್ಲೇ ನಾಯಿಯೊಂದಕ್ಕೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವುದು ಇದೇ ಮೊದಲು ಎಂದು ಪಶುವೈದ್ಯರು ಜೂಲಿಯೆಟ್‌ಗೆ ದೆಹಲಿಯ ಮ್ಯಾಕ್ಸ್ ಪೆಟ್ಜ್ ಆಸ್ಪತ್ರೆಯ ಡಾ. ಭಾನು ದೇವ್​​ ಶರ್ಮಾ ಹೇಳಿದ್ದಾರೆ. 7 ವರ್ಷದ ಬೀಗಲ್ ತಳಿಯ ಜೂಲಿಯೆಟ್ ಕಳೆದ ಎರಡು ವರ್ಷಗಳಿಂದ ಮಿಟ್ರಲ್ ವಾಲ್ವ್ (ಹೃದಯ ಸಂಬಂಧಿ ಕಾಯಿಲೆ) ನಿಂದ ಬಳಲುತ್ತಿತ್ತು. ಇದೀಗ ಶ್ವಾನ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ಡಾ. ಶರ್ಮಾ ತಿಳಿಸಿದ್ದಾರೆ.

ಮೇ 30 ರಂದು ಟ್ರಾನ್ಸ್‌ಕ್ಯಾಥೆಟರ್ ಎಡ್ಜ್-ಟು-ಎಡ್ಜ್ ಶಸ್ತ್ರಚಿಕಿತ್ಸೆ ನಡೆದಿದೆ. ಇದು ಹೈಬ್ರಿಡ್ ಶಸ್ತ್ರಚಿಕಿತ್ಸೆಯಾಗಿದ್ದು, ಈ ಶಸ್ತ್ರಚಿಕಿತ್ಸೆಯಲ್ಲಿ, ದೇಹದಲ್ಲಿ ಗಾಯ ಮಾಡದೆಯೇ ರಕ್ತನಾಳದ ಮೂಲಕ ಉಪಕರಣವನ್ನು ಹಾದುಹೋಗುವ ಮೂಲಕ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವರದಕ್ಷಿಣೆ ತಗೊಂಡು ಬಾ, ಇಲ್ಲದಿದ್ದರೆ ತಮ್ಮನ ಜೊತೆ ಮಲಗು ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

ಮೇ. 30 ರಂದು ಈ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎರಡು ದಿನಗಳ ನಂತರ ನಾಯಿಯನ್ನು ಡಿಸ್ಚಾರ್ಜ್​​​ ಮಾಡಲಾಗಿದೆ. ನಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ಏಷ್ಯಾದಲ್ಲಿ ಮೊದಲ ಬಾರಿಗೆ. ಇದು ವಿಶ್ವದಲ್ಲೇ ಎರಡನೆಯದು ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ಮಿಟ್ರಲ್ ವಾಲ್ವ್ ಕಾಯಿಲೆಯು ಭಾರತದಲ್ಲಿ ಮತ್ತು ಪ್ರಪಂಚದ ಇತರ ಭಾಗಗಳಲ್ಲಿ ನಾಯಿಗಳಲ್ಲಿ ಅತ್ಯಂತ ಸಾಮಾನ್ಯವಾದ ಹೃದಯ ಕಾಯಿಲೆಯಾಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವ ನಾಯಿಗಳು ಸಾಯುವ ಅಪಾಯ ಹೆಚ್ಚು ಎಂದು ವೈದ್ಯರು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ