AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಾಲಕನ ಮೇಲೆ ನಾಯಿದಾಳಿ, ಕೇರಳದಲ್ಲಿ ನಡೆದ ಘಟನೆ

Dog Bite : ಮನೆಯ ಬಳಿ ಸೈಕಲ್​ ನಿಲ್ಲಿಸುತ್ತಿದ್ದಂತೆ ನಾಯಿಯೊಂದು ಈ ಬಾಲಕನ ಮೇಲೆ ಎರಗಿದೆ. ಮುಂದೇನಾಯಿತು?

Viral Video : ಬಾಲಕನ ಮೇಲೆ ನಾಯಿದಾಳಿ, ಕೇರಳದಲ್ಲಿ ನಡೆದ ಘಟನೆ
ಬಾಲಕನ ಮೇಲೆ ದಾಳಿ ಮಾಡುತ್ತಿರುವ ನಾಯಿ
TV9 Web
| Edited By: |

Updated on:Sep 13, 2022 | 11:13 AM

Share

Viral Video : ಇತ್ತೀಚೆಗೆ ಮಹಾನಗರಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದೆಹಲಿಯಲ್ಲಿ ಮಾತ್ರ ಈ ಸಮಸ್ಯೆ ವಿಪರೀತಕ್ಕೆ ತಲುಪಿದೆ ಎಂಬಂಥ ಪರಿಸ್ಥಿತಿ ಇತ್ತು. ಆದರೆ ಇತರೇ ರಾಜ್ಯಗಳಲ್ಲೂ, ಹಳ್ಳಿಹಳ್ಳಿಗಳಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನುವುದು ಒಂದೊಂದೇ ಪ್ರಕರಣಗಳ ಮೂಲಕ ಬೆಳಕಿಗೆ ಬರುತ್ತಿದೆ. ಹೀಗಾಗಿ ನಾಯಿಗಳೆಂದರೆ ಸ್ವಲ್ಪ ಭಯದ ವಾತಾವರಣ ಎಲ್ಲೆಡೆ ಉಂಟಾಗುತ್ತಿದೆ. ಕೇರಳದ ಕೋಝಿಕ್ಕೋಡ್​ನ ಹಳ್ಳಿಯೊಂದರಲ್ಲಿ ನಾಯಿಯೊಂದು ಬಾಲಕನ ಮೇಲೆ ಎರಗಿ ಅತ್ಯಂತ ಕ್ರೂರವಾಗಿ ದಾಳಿ ಮಾಡಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ರೆಡ್ಡಿಟ್​, ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದೆ. 7 ನೇ ತರಗತಿ ಓದುತ್ತಿರುವ ಈತ ಎಲ್ಲೋ ಹೊರಹೋಗಿದ್ದವ ವಾಪಾಸು ಮನೆಯ ಬಳಿ ಬಂದು ಸೈಕಲ್​ ನಿಲ್ಲಿಸುತ್ತಿದ್ದ. ಆಗ ಇದ್ದಕ್ಕಿದ್ದಂತೆ ಓಡಿಬಂದ ಕಪ್ಪು ನಾಯಿಯೊಂದು ಅವನ ಮೇಲೆ ಭೀಕರವಾಗಿ ಎರಗಿದೆ. ಅವನ ಕೈಯನ್ನು ಕಚ್ಚಿ ಗಟ್ಟಿಯಾಗಿ ಹಿಡಿದಿದೆ. ಆಘಾತಕ್ಕೊಳಗಾದ ಬಾಲಕ ನೆಲಕ್ಕುರುಳಿ ಬಿದ್ದಿದ್ದಾನೆ. ಎದ್ದೇಳಲು ನೋಡಿದಾಗ ತೋಳನ್ನು ಕಚ್ಚಿ ಹಿಡಿದಿದೆ. ಇದೆಲ್ಲವನ್ನು ನೋಡಿದ ಸುತ್ತಮುತ್ತಲಿನ ಮಕ್ಕಳು ಗಾಬರಿಯಾಗಿ ತಮ್ಮ ಮನೆಗಳಿಗೆ ಓಡಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ബേപ്പൂര്‍ അരക്കിണറില്‍ ആറാം ക്ലാസ് വിദ്യാര്‍ഥിയെ തെരുവ് നായ ആക്രമിക്കുന്നതിന്റെ ദൃശ്യങ്ങള്‍ from Kerala

ಎಷ್ಟೇ ತಪ್ಪಿಸಿಕೊಳ್ಳಲು ಹೋದರೂ ನಾಯಿ ಬಾಲಕನನ್ನು ಬಿಡುವುದೇ ಇಲ್ಲ. ಕೊನೆಗೂ ಹೇಗೋ ಎದ್ದು ಮನೆಯೊಳಗೆ ಓಡುತ್ತಾನೆ. ನಂತರ ನೆರೆಹೊರೆಯವರು ಬಾಲಕನ ಮನೆಗೆ ಧಾವಿಸುತ್ತಾರೆ.

ಇತ್ತೀಚೆಗೆ ಗಾಝಿಯಾಬಾದ್​ನ ಹೌಸಿಂಗ್ ಸೊಸೈಟಿಯ ಲಿಫ್ಟ್​ನೊಳಗೆ ಸಾಕುನಾಯಿಯೊಂದು ಪುಟ್ಟ ಹುಡುಗನಿಗೆ ಕಚ್ಚಿದ ಘಟನೆ ನಡೆದಿತ್ತು. ಇಂಥದೇ ಪ್ರಕರಣ ನೋಯ್ಡಾದಲ್ಲಿಯೂ ನಡೆದಿತ್ತು. ಈ ಎಲ್ಲ ಪ್ರಕರಣಗಳನ್ನು ಗಮನಿಸಿದ ದೆಹಲಿಯ ಮುನ್ಸಿಪಲ್ ಕಾರ್ಪೋರೇಷನ್​, ತಮ್ಮ ತಮ್ಮ ಸಾಕುಪ್ರಾಣಿಗಳನ್ನು ನೋಂದಾಯಿಸಿಕೊಳ್ಳಲು ಆದೇಶ ಹೊರಡಿಸಿದೆ. ನಿಯಮ ಅನುಸರಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಯಾವ ಕಾರಣಕ್ಕಾಗಿ ಪ್ರಾಣಿಗಳು ಯಾವಾಗ ದಾಳಿ ಮಾಡುತ್ತವೆ ಎಂದು ನಿಖರವಾಗಿ ಹೇಳುವುದು ಕಷ್ಟಸಾಧ್ಯ.  ಹಾಗಾಗಿ ಮೈಯೆಲ್ಲ ಕಣ್ಣಾಗಿರಬೇಕಾಗುತ್ತದೆ ಓಡಾಡುವಾಗ. ನಾಯಿಯನ್ನು ಸಾಕಿದವರೂ ಅಷ್ಟೇ ಜವಾಬ್ದಾರಿಯಿಂದ ವರ್ತಿಸುವುದೂ ಬಹಳೇ ಮುಖ್ಯ.

ಮತ್ತಷ್ಟು ವೈರಲ್​  ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:03 am, Tue, 13 September 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ