AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಾಲಕನ ಮೇಲೆ ನಾಯಿದಾಳಿ, ಕೇರಳದಲ್ಲಿ ನಡೆದ ಘಟನೆ

Dog Bite : ಮನೆಯ ಬಳಿ ಸೈಕಲ್​ ನಿಲ್ಲಿಸುತ್ತಿದ್ದಂತೆ ನಾಯಿಯೊಂದು ಈ ಬಾಲಕನ ಮೇಲೆ ಎರಗಿದೆ. ಮುಂದೇನಾಯಿತು?

Viral Video : ಬಾಲಕನ ಮೇಲೆ ನಾಯಿದಾಳಿ, ಕೇರಳದಲ್ಲಿ ನಡೆದ ಘಟನೆ
ಬಾಲಕನ ಮೇಲೆ ದಾಳಿ ಮಾಡುತ್ತಿರುವ ನಾಯಿ
TV9 Web
| Edited By: |

Updated on:Sep 13, 2022 | 11:13 AM

Share

Viral Video : ಇತ್ತೀಚೆಗೆ ಮಹಾನಗರಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದೆಹಲಿಯಲ್ಲಿ ಮಾತ್ರ ಈ ಸಮಸ್ಯೆ ವಿಪರೀತಕ್ಕೆ ತಲುಪಿದೆ ಎಂಬಂಥ ಪರಿಸ್ಥಿತಿ ಇತ್ತು. ಆದರೆ ಇತರೇ ರಾಜ್ಯಗಳಲ್ಲೂ, ಹಳ್ಳಿಹಳ್ಳಿಗಳಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನುವುದು ಒಂದೊಂದೇ ಪ್ರಕರಣಗಳ ಮೂಲಕ ಬೆಳಕಿಗೆ ಬರುತ್ತಿದೆ. ಹೀಗಾಗಿ ನಾಯಿಗಳೆಂದರೆ ಸ್ವಲ್ಪ ಭಯದ ವಾತಾವರಣ ಎಲ್ಲೆಡೆ ಉಂಟಾಗುತ್ತಿದೆ. ಕೇರಳದ ಕೋಝಿಕ್ಕೋಡ್​ನ ಹಳ್ಳಿಯೊಂದರಲ್ಲಿ ನಾಯಿಯೊಂದು ಬಾಲಕನ ಮೇಲೆ ಎರಗಿ ಅತ್ಯಂತ ಕ್ರೂರವಾಗಿ ದಾಳಿ ಮಾಡಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ರೆಡ್ಡಿಟ್​, ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದೆ. 7 ನೇ ತರಗತಿ ಓದುತ್ತಿರುವ ಈತ ಎಲ್ಲೋ ಹೊರಹೋಗಿದ್ದವ ವಾಪಾಸು ಮನೆಯ ಬಳಿ ಬಂದು ಸೈಕಲ್​ ನಿಲ್ಲಿಸುತ್ತಿದ್ದ. ಆಗ ಇದ್ದಕ್ಕಿದ್ದಂತೆ ಓಡಿಬಂದ ಕಪ್ಪು ನಾಯಿಯೊಂದು ಅವನ ಮೇಲೆ ಭೀಕರವಾಗಿ ಎರಗಿದೆ. ಅವನ ಕೈಯನ್ನು ಕಚ್ಚಿ ಗಟ್ಟಿಯಾಗಿ ಹಿಡಿದಿದೆ. ಆಘಾತಕ್ಕೊಳಗಾದ ಬಾಲಕ ನೆಲಕ್ಕುರುಳಿ ಬಿದ್ದಿದ್ದಾನೆ. ಎದ್ದೇಳಲು ನೋಡಿದಾಗ ತೋಳನ್ನು ಕಚ್ಚಿ ಹಿಡಿದಿದೆ. ಇದೆಲ್ಲವನ್ನು ನೋಡಿದ ಸುತ್ತಮುತ್ತಲಿನ ಮಕ್ಕಳು ಗಾಬರಿಯಾಗಿ ತಮ್ಮ ಮನೆಗಳಿಗೆ ಓಡಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ബേപ്പൂര്‍ അരക്കിണറില്‍ ആറാം ക്ലാസ് വിദ്യാര്‍ഥിയെ തെരുവ് നായ ആക്രമിക്കുന്നതിന്റെ ദൃശ്യങ്ങള്‍ from Kerala

ಎಷ್ಟೇ ತಪ್ಪಿಸಿಕೊಳ್ಳಲು ಹೋದರೂ ನಾಯಿ ಬಾಲಕನನ್ನು ಬಿಡುವುದೇ ಇಲ್ಲ. ಕೊನೆಗೂ ಹೇಗೋ ಎದ್ದು ಮನೆಯೊಳಗೆ ಓಡುತ್ತಾನೆ. ನಂತರ ನೆರೆಹೊರೆಯವರು ಬಾಲಕನ ಮನೆಗೆ ಧಾವಿಸುತ್ತಾರೆ.

ಇತ್ತೀಚೆಗೆ ಗಾಝಿಯಾಬಾದ್​ನ ಹೌಸಿಂಗ್ ಸೊಸೈಟಿಯ ಲಿಫ್ಟ್​ನೊಳಗೆ ಸಾಕುನಾಯಿಯೊಂದು ಪುಟ್ಟ ಹುಡುಗನಿಗೆ ಕಚ್ಚಿದ ಘಟನೆ ನಡೆದಿತ್ತು. ಇಂಥದೇ ಪ್ರಕರಣ ನೋಯ್ಡಾದಲ್ಲಿಯೂ ನಡೆದಿತ್ತು. ಈ ಎಲ್ಲ ಪ್ರಕರಣಗಳನ್ನು ಗಮನಿಸಿದ ದೆಹಲಿಯ ಮುನ್ಸಿಪಲ್ ಕಾರ್ಪೋರೇಷನ್​, ತಮ್ಮ ತಮ್ಮ ಸಾಕುಪ್ರಾಣಿಗಳನ್ನು ನೋಂದಾಯಿಸಿಕೊಳ್ಳಲು ಆದೇಶ ಹೊರಡಿಸಿದೆ. ನಿಯಮ ಅನುಸರಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಯಾವ ಕಾರಣಕ್ಕಾಗಿ ಪ್ರಾಣಿಗಳು ಯಾವಾಗ ದಾಳಿ ಮಾಡುತ್ತವೆ ಎಂದು ನಿಖರವಾಗಿ ಹೇಳುವುದು ಕಷ್ಟಸಾಧ್ಯ.  ಹಾಗಾಗಿ ಮೈಯೆಲ್ಲ ಕಣ್ಣಾಗಿರಬೇಕಾಗುತ್ತದೆ ಓಡಾಡುವಾಗ. ನಾಯಿಯನ್ನು ಸಾಕಿದವರೂ ಅಷ್ಟೇ ಜವಾಬ್ದಾರಿಯಿಂದ ವರ್ತಿಸುವುದೂ ಬಹಳೇ ಮುಖ್ಯ.

ಮತ್ತಷ್ಟು ವೈರಲ್​  ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:03 am, Tue, 13 September 22

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ