AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನಿಷ್ಟದ ಆಟಿಕೆಯನ್ನು ಅಜ್ಜಿ ಸರಿ ಮಾಡಿಕೊಡುವವರೆಗೆ ತಾಳ್ಮೆಯಿಂದ ಕಾದು ಕುಳಿತ ನಾಯಿ; ವಿಡಿಯೊ ನೋಡಿ

ನಾಯಿಯು ಟೈನಿ ಎಂಬ ತನ್ನ ನೆಚ್ಚಿನ ಸ್ಟಫ್ಡ್ ಆಟಿಕೆ ಜತೆ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಆಟಿಕೆ ಹರಿದುಹೋಗುವುದನ್ನು ವಿಡಿಯೊದ ಆರಂಭದಲ್ಲಿ ತೋರಿಸಲಾಗಿದೆ. ನಂತರ ದಾದಿ...

ತನ್ನಿಷ್ಟದ ಆಟಿಕೆಯನ್ನು ಅಜ್ಜಿ ಸರಿ ಮಾಡಿಕೊಡುವವರೆಗೆ ತಾಳ್ಮೆಯಿಂದ ಕಾದು ಕುಳಿತ ನಾಯಿ; ವಿಡಿಯೊ ನೋಡಿ
ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ವಿಡಿಯೊ ದೃಶ್ಯ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Apr 10, 2022 | 8:28 PM

Share

ಮೊಮ್ಮಕ್ಕಳು ಮತ್ತು ಅಜ್ಜಿಯರ ನಡುವಿನ ಸಂಬಂಧವು ವಿಶೇಷವಾಗಿದೆ. ಅವರು ತಮ್ಮ ಮೊಮ್ಮಕ್ಕಳನ್ನು ಬೆಂಬಲಿಸಲು ಮತ್ತು ಅವರಿಗೆ ಸಹಾಯ ಮಾಡಲು ಯಾವಾಗಲೂ ಸಿದ್ಧರಿರುತ್ತಾರೆ. ಈ ಪ್ರೀತಿಯು ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಸಹ ಪ್ರಾಣಿಗಳ ಜತೆಗೂ ಇರುತ್ತದೆ.ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಳ್ಳಲಾದ ಈ ವಿಡಿಯೊದಲ್ಲಿ ನಾಯಿಯು ತನ್ನ ನೆಚ್ಚಿನ ಆಟಿಕೆಯನ್ನು ದಾದಿ (ಅಜ್ಜಿ)ಸರಿಪಡಿಸಿಕೊಡುವುದನ್ನು ತಾಳ್ಮೆಯಿಂದ ಕಾಯುತ್ತಿರುವುದನ್ನು ತೋರಿಸುತ್ತದೆ. ರಿಯೊ ನಿಮೇಶ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊವನ್ನು “ಧನ್ಯವಾದಗಳು ದಾದಿ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾಗಿದೆ. ನಾಯಿಯು ಟೈನಿ ಎಂಬ ತನ್ನ ನೆಚ್ಚಿನ ಸ್ಟಫ್ಡ್ ಆಟಿಕೆ ಜತೆ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಆಟಿಕೆ ಹರಿದುಹೋಗುವುದನ್ನು ವಿಡಿಯೊದ ಆರಂಭದಲ್ಲಿ ತೋರಿಸಲಾಗಿದೆ. ನಂತರ ದಾದಿ ನಾಯಿಯ ರಕ್ಷಣೆಗೆ ಬಂದು ಆಟಿಕೆ ಸರಿಪಡಿಸುವುದನ್ನು ವಿಡಿಯೊ ತೋರಿಸುತ್ತದೆ. ಹಿರಿಯ ಮಹಿಳೆ ಟೈನಿಯನ್ನು ಸರಿಪಡಿಸುವಾಗ ನಾಯಿ ತಾಳ್ಮೆಯಿಂದ ಕಾಯುವ ರೀತಿ ಹೃದಯಸ್ಪರ್ಶಿಯಾಗಿದೆ.

ಕೆಲ ದಿನಗಳ ಹಿಂದೆ ವಿಡಿಯೊ ಪೋಸ್ಟ್ ಮಾಡಲಾಗಿದೆ. ಇಲ್ಲಿಯವರೆಗೆ ಇದು 3.1 ಲಕ್ಷಕ್ಕೂ ಹೆಚ್ಚು ಲೈಕ್ ಗಳಿಸಿದೆ. ಈ ವಿಡಿಯೊಗೆ ಹಲವರು ಲವ್ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದ್ದಾರೆ. ” This made my day ” ಎಂದು ಇನ್‌ಸ್ಟಾಗ್ರಾಮ್‌ ಬಳಕೆದಾರರೊಬ್ಬರು ಬರೆದಿದ್ದಾರೆ. “ಅದ್ಭುತ! ಅವನು ತನ್ನ ಆಟಿಕೆಗಾಗಿ ಕಾಯುವ ರೀತಿ ಅಸಾಧಾರಣವಾಗಿದೆ” ಎಂದು ಮತ್ತೊಬ್ಬರು ಪೋಸ್ಟ್ ಮಾಡಿದ್ದಾರೆ. “ನನಗವನು ಇಷ್ಟವಾದ” ಎಂದು ಬಳಕೆದಾರರೊಬ್ಬರು ಹೇಳಿದ್ದು, “ಅವನು ಭರವಸೆಯ ಕಣ್ಣುಗಳಿಂದ ದಾದಿಯನ್ನು ನೋಡುತ್ತಿದ್ದ ರೀತಿ ನೋಡಿ ಎಂದು ಇನ್ನೊಬ್ಬರು ಕಾಮೆಂಟಿಸಿದ್ದಾರೆ.

ಇದನ್ನೂ ಓದಿAP Cabinet ಆಂಧ್ರ ಪ್ರದೇಶದಲ್ಲಿ ಜಗನ್ ರೆಡ್ಡಿ ಸಚಿವ ಸಂಪುಟ ಪುನಾರಚನೆ; ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳಿಗೆ ಮಣೆ 

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!