AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಮಾನವನ ಸ್ನೇಹವನ್ನು ಸದಾ ಬಯಸುವ ನಾಯಿಗಳ ವಿಡಿಯೋ ಆಗಾಗ ಕಾಣಸಿಗುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಿಯೊಂದು ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವಿಡಿಯೋ ವೈರಲ್​ ಆಗಿದೆ.

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ
ಜಿಂಕೆಮರಿಯನ್ನು ರಕ್ಷಿಸಿದ ನಾಯಿ
TV9 Web
| Updated By: Pavitra Bhat Jigalemane|

Updated on:Jan 21, 2022 | 10:00 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಹೃದಯಸ್ಪರ್ಶಿ ವಿಡಿಯೋಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಅದು ಪ್ರಾಣಿಗಳದ್ದೇ ಇರಬಹುದು ಅಥವಾ ಇನ್ನಿತರ ವಿಡಿಯೋಗಳೇ ಆಗಿರಬಹುದು. ಅದರಲ್ಲೂ ಮಾನವನ ಸ್ನೇಹವನ್ನು ಸದಾ ಬಯಸುವ ನಾಯಿಗಳ ವಿಡಿಯೋ ಆಗಾಗ ಕಾಣಸಿಗುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಿಯೊಂದು ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವಿಡಿಯೋ ವೈರಲ್​ ಆಗಿದೆ.  ಇಂಡಿಯಾ ಟುಡೆ ವರದಿಯ ಪ್ರಕಾರ ನಾಯಿಯ ಮಾಲೀಕ ನೀರಿನಲ್ಲಿದ್ದ ಜಿಂಕೆಯನ್ನು ನಾಯಿ ರಕ್ಷಿಸುವುದನ್ನು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by India Today (@indiatoday)

ವಿಡಿಯೋದಲ್ಲಿ ಹರಿಯುತ್ತಿರುವ ನೀರಿನಲ್ಲಿ ಜಿಂಕೆಯ ಮರಿಯೊಂದು ತೇಲಿಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ಕಪ್ಪು ಬಣ್ಣದ ನಾಯಿಯೊಂದು ನೀರಿಗಿಳಿದು ಜಿಂಕೆಯ ಮರಿಯನ್ನು ಬಾಯಿಯಲ್ಲಿ ಕಚ್ಚಿಕೊಂಡು ದಡಕ್ಕೆ ಬರುತ್ತದೆ. ನೀರಿನಲ್ಲಿ ಬಿದ್ದು ಗಾಬರಿಗೊಂಡ ಜಿಂಕೆ ಮರಿ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ಇಂಡಿಯಾ ಟುಡೆ ಸುದ್ದಿ ಸಂಸ್ಥೆ ಅಧಿಕೃತ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾಯಿಗಳು ಭೂಮಿಯಲ್ಲಿರುವ ಅದ್ಭುತ ಜೀವಿಗಳಲ್ಲಿ ಒಂದು ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Foods of Karnataka: ತಿಂದ್ರೆ ಗ್ಯಾಸ್ ಟ್ರಬಲ್, ತಿನ್ನದೇ ಇದ್ದರೆ ಜೀವನವೇ ವ್ಯರ್ಥ: ಟ್ವಿಟರ್​ನಲ್ಲಿ ಹವಾ ಎಬ್ಬಿಸಿದೆ ಅವರೇಕಾಳು ರೊಟ್ಟಿ

Published On - 10:00 am, Fri, 21 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ