AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?

Dog and Cat : ಈ ನಾಯಿ ಎಲ್ಲಿಂದಲೋ ಮರದ ತುಂಡನ್ನು ತಂದಿಟ್ಟಿದೆ. ಮರಿಬೆಕ್ಕು ದಾಟಿ ದಡ ತಲುಪಿದೆ. ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ. ಆದರೆ ನೆಟ್ಟಿಗರ ವಾದವೇನು ಈ ಬಗ್ಗೆ?

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?
Dog uses a plank to help kitten stuck in water
TV9 Web
| Edited By: ಶ್ರೀದೇವಿ ಕಳಸದ|

Updated on: Nov 14, 2022 | 1:12 PM

Share

Viral Video : ಈತನಕ 1.8 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. ಸಣ್ಣ ತೊರೆಯ ಮಧ್ಯೆ ಬೆಕ್ಕಿನಮರಿಯೊಂದು ಸಿಕ್ಕಿಹಾಕಿಕೊಂಡುಬಿಟ್ಟಿದೆ. ಕಲ್ಲಿನ ಮೇಲೆ ನಿಂತು ಅತ್ತೂ ದಾಟದೆ ಇತ್ತೂ ದಾಟದೆ ಕಂಗಾಲಾಗಿದೆ. ಅಲ್ಲಿಗೆ ಬಂದ ನಾಯಿಯೊಂದು ಮರದ ತುಂಡನ್ನು ತಂದು ನೀರನ್ನು ದಾಟಲು ಸಹಾಯ ಮಾಡಿದೆ. ಈ ವಿಡಿಯೋ ನೋಡಿದ ಯಾರಿಗೂ ಆಹಾ ಎನ್ನಿಸದೇ ಇರದು. ಒಮ್ಮೆ ನಾಯಿಯನ್ನು ಮುದ್ದಾಡಬೇಕು ಎನ್ನಿಸದೇ ಇರದು. ಹಾಗೆಯೇ ಬೆಕ್ಕನ್ನು ಬೆಚ್ಚಗೆ ಎತ್ತಿಕೊಳ್ಳಬೇಕು ಎನ್ನಿಸದೇ ಇರದು. ವಿಡಿಯೋ ನೋಡಿ.

ಎಷ್ಟೊತ್ತಿನಿಂದ ಈ ಮರಿಬೆಕ್ಕು ಹೀಗೆ ನಟ್ಟನಡುವೆ ನಿಂತುಕೊಂಡಿತ್ತೋ, ನಿಂತು ಹೆದರಿತ್ತೋ ಗೊತ್ತಿಲ್ಲ. ಅಂತೂ ಈ ನಾಯಿ ಮರದ ತುಂಡನ್ನು ಎಲ್ಲಿಂದಲೋ ಹುಡುಕಿಕೊಂಡು ಬಂದಿದೆ. ಸರಾಗವಾಗಿ ಬೆಕ್ಕು ದಾಟಿದೆ. ಹೀಗೆಂದುಕೊಳ್ಳುತ್ತ ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮರುಗಿದ್ದೀರಿ, ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ.

ಆದರೆ ನೆಟ್ಟಿಗರು ಮಾತ್ರ ಇದನ್ನು ನೋಡಿ ಕೋಪಿಸಿಕೊಂಡಿದ್ದಾರೆ. ಈ ಮರಿಬೆಕ್ಕನ್ನು ಹೀಗೆ ನಡೆಸಿಕೊಂಡಿದ್ದು ತಪ್ಪು, ಇಂಥ ವಿಡಿಯೋಗಳನ್ನು ನೋಡಲು ಜನರನ್ನು ಪ್ರೋತ್ಸಾಹಿಸಬೇಡಿ. ಈ ವಿಡಿಯೋ ಮಾಡುವಾಗ ಅದೆಷ್ಟು ಹೊತ್ತಿನಿಂದ ಮರಿಬೆಕ್ಕಿಗೆ ಹೀಗೆ ಹಿಂಸೆ ಕೊಟ್ಟಿದ್ದಾರೋ ಏನೋ. ಜನ ಲೈಕ್ಸ್​​, ಶೇರ್​ ಮೂಲಕ ಹಣ ಏನೆಲ್ಲ ಮಾಡಲೂ ತಯಾರು ಎಂದಿದ್ದಾರೆ.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡುತ್ತಿದ್ದರೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ