AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಮಹಾರಾಷ್ಟ್ರದ ಪಂಢರಪುರದಲ್ಲಿ ಮಾಲೀಕರಿಂದ ಮಿಸ್​​ ಆಗಿದ್ದ ಶ್ವಾನ 4 ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ತನ್ನ ಮನೆಗೆ ಬಂದು ತಲುಪಿದೆ. ಆಲ್ ಅಬೌಟ್ ಬೆಳಗಾವಿ ಎಂಬ ಹೆಸರಿನ ಫೇಸ್​​ಬುಕ್​​ ಖಾತೆಯಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

Viral Photo: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ
ಅಕ್ಷತಾ ವರ್ಕಾಡಿ
|

Updated on: Jul 31, 2024 | 6:07 PM

Share

ನಾಯಿಯೊಂದು ಕಿಲೋಮೀಟರ್‌ಗಳಷ್ಟು ದೂರ ನಡೆದು ರಾಜ್ಯದ ಗಡಿಗಳನ್ನು ದಾಟಿ ತನ್ನ ಮಾಲೀಕರೊಂದಿಗೆ ಮತ್ತೆ ಸೇರಿದ ಹೃದಯಸ್ಪರ್ಶಿ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 200 ಕಿಲೋ ಮೀಟರ್ ದೂರ ಅಂದರೆ ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಶ್ವಾನ ಮನೆಯ ಮುಂದೆ ಪ್ರತ್ಯಕ್ಷವಾಗಿದೆ ​​. ಮಹಾರಾಷ್ಟ್ರದ ಪಂಢರಪುರದಲ್ಲಿ ಮಾಲೀಕರಿಂದ ಮಿಸ್​​ ಆಗಿದ್ದ ಶ್ವಾನ 4 ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ತನ್ನ ಮನೆಗೆ ಬಂದು ತಲುಪಿದೆ.

ಬೆಳಗಾವಿ ಮೂಲದ ಫೇಸ್‌ಬುಕ್ ಪುಟವೊಂದು ಈ ಘಟನೆಯನ್ನು ಹೊರತಂದಿದ್ದು, ಆಷಾಢ ಏಕಾದಶಿಯಂದು ಸುಮಾರು 200 ಕಿಲೋ ಮೀಟರ್​​ ಪಂಢರಪುರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಕುಟುಂಬದೊಂದಿಗೆ ಬಂದಿದ್ದ ನಾಯಿ ಜನಸಂದಣಿಯ ನಡುವೆ ಕಳೆದು ಹೋಗಿತ್ತು. ತಮ್ಮ ಮುದ್ದಿನ ಶ್ವಾನ ಎಷ್ಟೇ ಹುಡುಕಿದರೂ ಸಿಗದೇ ಇರುವುದರಿಂದ ಈ ಕುಟುಂಬ ಬೇಸರದಿಂದ ಮನೆಗೆ ಮರಳಿದ್ದಾರೆ. ಆದರೆ ಪವಾಡ ಎಂಬಂತೆ ಕಾಣಿಯಾಗಿದ್ದ ನಾಯಿ ಎರಡು ದಿನಗಳ ನಂತರ ಸುಮಾರು ಇನ್ನೂರು ಕಿಲೋಮೀಟರ್ ದೂರದಿಂದ ಮನೆಗೆ ಬಂದು ತಲುಪುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ, ಕಾರಿನೊಳಗೆ ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಆಲ್ ಅಬೌಟ್ ಬೆಳಗಾವಿ ಎಂಬ ಹೆಸರಿನ ಫೇಸ್​​ಬುಕ್​​ ಖಾತೆಯಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಸದ್ಯ ಫೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಇದಲ್ಲದೇ ಬೆಳಗಾವಿ ಜಿಲ್ಲೆಯ ಪ್ರಾಣಿ ಕಲ್ಯಾಣ ಸಂಘವು ಈ ಶ್ವಾನ ಚಿತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ