AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!

Domino's India : ಈ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡೋಮಿನೋಸ್​ ಇಂಡಿಯಾ ಪ್ರತಿಕ್ರಿಯಿಸಿದೆ.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
ಎಂಥ ಶುಚಿ ಎಂಥ ರುಚಿ ಈ ಪಿಝಾ!
TV9 Web
| Edited By: ಶ್ರೀದೇವಿ ಕಳಸದ|

Updated on: Aug 15, 2022 | 3:21 PM

Share

Domino’s Pizza : ರುಚಿಯಾದ ಪಿಝಾಗೆ ಮರುಳಾಗದವರು ಯಾರಿದ್ಧಾರೆ? ಈ ಇಟಾಲಿಯನ್ ತಿನಿಸಿನ ಬಗ್ಗೆ ಎಳೆಯರಿಂದ ಹಿಡಿದು ಮುದುಕರವರೆಗೂ ಒಮ್ಮೆ ಬಾಯಲ್ಲಿ ಚಿಲ್ ಎನ್ನುತ್ತದೆ. ಆದರೆ ಇಲ್ಲಿರುವ ಫೋಟೋ ನೋಡಿದ ಮೇಲೂ ನಿಮಗೆ ಪಿಝಾ ಬಗ್ಗೆ ಅಷ್ಟೇ ವ್ಯಾಮೋಹ ಉಳಿಯುವುದೇ? ಬೆಂಗಳೂರಿನ ಪಿಝಾ ಹಟ್ ಔಟ್​ಲೆಟ್​ನಲ್ಲಿ ಪಿಝಾ ಹಿಟ್ಟಿನ ಟ್ರೇ ಮೇಲೆ ಶೌಚಾಲಯ ಸ್ವಚ್ಛಗೊಳಿಸುವ ಬ್ರಷ್, ಬಟ್ಟೆ, ಬ್ಯಾಗ್​ವುಳ್ಳ ಈ ಫೋಟೋ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಕ್ಕೆ ಡೋಮಿನೋಸ್ ಇಂಡಿಯಾ ಈಗ ಪ್ರತಿಕ್ರಿಯೆ ನೀಡಿದೆ. ಟ್ವಿಟರ್ ಖಾತೆದಾರ ತುಷಾರ್ ಎಂಬುವವರು ಈ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಆ ಚಿತ್ರದ ಬಗ್ಗೆ ವಿವರಣೆ ನೀಡಿ, ದಯವಿಟ್ಟು ಮನೆಯಲ್ಲಿ ಮಾಡಿದ ಅಡುಗೆಗೆ ಆದ್ಯತೆ ಕೊಡಿ ಎಂದಿದ್ದರು.

ಈ ಚಿತ್ರವನ್ನು ನೋಡಿದ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನು ಗಮನಿಸಿದ ಡೋಮಿನೋಸ್ ಇಂಡಿಯಾ, ‘ಅತ್ಯುನ್ನತ ರೀತಿಯಲ್ಲಿ ಶುಚಿತ್ವ ಮತ್ತು ಆಹಾರ ಸುರಕ್ಷತೆ ಬಗ್ಗೆ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತ ಬಂದಿದ್ದೇವೆ. ನಮ್ಮ ಗಮನಕ್ಕೆ ತಂದ ಈ ಘಟನೆಯ ಕುರಿತು ಸಂಪೂರ್ಣ ತನಿಖೆ ಮಾಡಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಗ್ರಾಹಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾವು ಸದಾ ಬದ್ಧರಾಗಿದ್ದೇವೆ ಎಂಬ ಭರವಸೆ ನೀಡುತ್ತೇವೆ’ ಎಂದು ಪ್ರತಿಕ್ರಿಯಿಸಿದೆ.

ಅನೇಕ ನೆಟ್ಟಿಗರು ಈ ಕುರಿತು ತಮಗಾದ ಅನುಭವ ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 5.1 ಸಾವಿರ ಲೈಕ್ಸ್, ಸುಮಾರು 2,000 ಕ್ಕಿಂತಲೂ ಹೆಚ್ಚು ರೀಟ್ವೀಟ್​ ಈ ಪೋಸ್ಟ್ ಒಳಗೊಂಡಿದೆ.

ಏನಂತೀರಿ ಪಿಝಾ ಪ್ರಿಯರೇ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ