Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!

Domino's India : ಈ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡೋಮಿನೋಸ್​ ಇಂಡಿಯಾ ಪ್ರತಿಕ್ರಿಯಿಸಿದೆ.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
ಎಂಥ ಶುಚಿ ಎಂಥ ರುಚಿ ಈ ಪಿಝಾ!
Follow us
| Edited By: ಶ್ರೀದೇವಿ ಕಳಸದ

Updated on: Aug 15, 2022 | 3:21 PM

Domino’s Pizza : ರುಚಿಯಾದ ಪಿಝಾಗೆ ಮರುಳಾಗದವರು ಯಾರಿದ್ಧಾರೆ? ಈ ಇಟಾಲಿಯನ್ ತಿನಿಸಿನ ಬಗ್ಗೆ ಎಳೆಯರಿಂದ ಹಿಡಿದು ಮುದುಕರವರೆಗೂ ಒಮ್ಮೆ ಬಾಯಲ್ಲಿ ಚಿಲ್ ಎನ್ನುತ್ತದೆ. ಆದರೆ ಇಲ್ಲಿರುವ ಫೋಟೋ ನೋಡಿದ ಮೇಲೂ ನಿಮಗೆ ಪಿಝಾ ಬಗ್ಗೆ ಅಷ್ಟೇ ವ್ಯಾಮೋಹ ಉಳಿಯುವುದೇ? ಬೆಂಗಳೂರಿನ ಪಿಝಾ ಹಟ್ ಔಟ್​ಲೆಟ್​ನಲ್ಲಿ ಪಿಝಾ ಹಿಟ್ಟಿನ ಟ್ರೇ ಮೇಲೆ ಶೌಚಾಲಯ ಸ್ವಚ್ಛಗೊಳಿಸುವ ಬ್ರಷ್, ಬಟ್ಟೆ, ಬ್ಯಾಗ್​ವುಳ್ಳ ಈ ಫೋಟೋ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಕ್ಕೆ ಡೋಮಿನೋಸ್ ಇಂಡಿಯಾ ಈಗ ಪ್ರತಿಕ್ರಿಯೆ ನೀಡಿದೆ. ಟ್ವಿಟರ್ ಖಾತೆದಾರ ತುಷಾರ್ ಎಂಬುವವರು ಈ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಆ ಚಿತ್ರದ ಬಗ್ಗೆ ವಿವರಣೆ ನೀಡಿ, ದಯವಿಟ್ಟು ಮನೆಯಲ್ಲಿ ಮಾಡಿದ ಅಡುಗೆಗೆ ಆದ್ಯತೆ ಕೊಡಿ ಎಂದಿದ್ದರು.

ಈ ಚಿತ್ರವನ್ನು ನೋಡಿದ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನು ಗಮನಿಸಿದ ಡೋಮಿನೋಸ್ ಇಂಡಿಯಾ, ‘ಅತ್ಯುನ್ನತ ರೀತಿಯಲ್ಲಿ ಶುಚಿತ್ವ ಮತ್ತು ಆಹಾರ ಸುರಕ್ಷತೆ ಬಗ್ಗೆ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತ ಬಂದಿದ್ದೇವೆ. ನಮ್ಮ ಗಮನಕ್ಕೆ ತಂದ ಈ ಘಟನೆಯ ಕುರಿತು ಸಂಪೂರ್ಣ ತನಿಖೆ ಮಾಡಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಗ್ರಾಹಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾವು ಸದಾ ಬದ್ಧರಾಗಿದ್ದೇವೆ ಎಂಬ ಭರವಸೆ ನೀಡುತ್ತೇವೆ’ ಎಂದು ಪ್ರತಿಕ್ರಿಯಿಸಿದೆ.

ಅನೇಕ ನೆಟ್ಟಿಗರು ಈ ಕುರಿತು ತಮಗಾದ ಅನುಭವ ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 5.1 ಸಾವಿರ ಲೈಕ್ಸ್, ಸುಮಾರು 2,000 ಕ್ಕಿಂತಲೂ ಹೆಚ್ಚು ರೀಟ್ವೀಟ್​ ಈ ಪೋಸ್ಟ್ ಒಳಗೊಂಡಿದೆ.

ಏನಂತೀರಿ ಪಿಝಾ ಪ್ರಿಯರೇ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ