AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!

Domino's India : ಈ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡೋಮಿನೋಸ್​ ಇಂಡಿಯಾ ಪ್ರತಿಕ್ರಿಯಿಸಿದೆ.

Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
ಎಂಥ ಶುಚಿ ಎಂಥ ರುಚಿ ಈ ಪಿಝಾ!
TV9 Web
| Edited By: ಶ್ರೀದೇವಿ ಕಳಸದ|

Updated on: Aug 15, 2022 | 3:21 PM

Share

Domino’s Pizza : ರುಚಿಯಾದ ಪಿಝಾಗೆ ಮರುಳಾಗದವರು ಯಾರಿದ್ಧಾರೆ? ಈ ಇಟಾಲಿಯನ್ ತಿನಿಸಿನ ಬಗ್ಗೆ ಎಳೆಯರಿಂದ ಹಿಡಿದು ಮುದುಕರವರೆಗೂ ಒಮ್ಮೆ ಬಾಯಲ್ಲಿ ಚಿಲ್ ಎನ್ನುತ್ತದೆ. ಆದರೆ ಇಲ್ಲಿರುವ ಫೋಟೋ ನೋಡಿದ ಮೇಲೂ ನಿಮಗೆ ಪಿಝಾ ಬಗ್ಗೆ ಅಷ್ಟೇ ವ್ಯಾಮೋಹ ಉಳಿಯುವುದೇ? ಬೆಂಗಳೂರಿನ ಪಿಝಾ ಹಟ್ ಔಟ್​ಲೆಟ್​ನಲ್ಲಿ ಪಿಝಾ ಹಿಟ್ಟಿನ ಟ್ರೇ ಮೇಲೆ ಶೌಚಾಲಯ ಸ್ವಚ್ಛಗೊಳಿಸುವ ಬ್ರಷ್, ಬಟ್ಟೆ, ಬ್ಯಾಗ್​ವುಳ್ಳ ಈ ಫೋಟೋ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಕ್ಕೆ ಡೋಮಿನೋಸ್ ಇಂಡಿಯಾ ಈಗ ಪ್ರತಿಕ್ರಿಯೆ ನೀಡಿದೆ. ಟ್ವಿಟರ್ ಖಾತೆದಾರ ತುಷಾರ್ ಎಂಬುವವರು ಈ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಆ ಚಿತ್ರದ ಬಗ್ಗೆ ವಿವರಣೆ ನೀಡಿ, ದಯವಿಟ್ಟು ಮನೆಯಲ್ಲಿ ಮಾಡಿದ ಅಡುಗೆಗೆ ಆದ್ಯತೆ ಕೊಡಿ ಎಂದಿದ್ದರು.

ಈ ಚಿತ್ರವನ್ನು ನೋಡಿದ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನು ಗಮನಿಸಿದ ಡೋಮಿನೋಸ್ ಇಂಡಿಯಾ, ‘ಅತ್ಯುನ್ನತ ರೀತಿಯಲ್ಲಿ ಶುಚಿತ್ವ ಮತ್ತು ಆಹಾರ ಸುರಕ್ಷತೆ ಬಗ್ಗೆ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತ ಬಂದಿದ್ದೇವೆ. ನಮ್ಮ ಗಮನಕ್ಕೆ ತಂದ ಈ ಘಟನೆಯ ಕುರಿತು ಸಂಪೂರ್ಣ ತನಿಖೆ ಮಾಡಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಗ್ರಾಹಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾವು ಸದಾ ಬದ್ಧರಾಗಿದ್ದೇವೆ ಎಂಬ ಭರವಸೆ ನೀಡುತ್ತೇವೆ’ ಎಂದು ಪ್ರತಿಕ್ರಿಯಿಸಿದೆ.

ಅನೇಕ ನೆಟ್ಟಿಗರು ಈ ಕುರಿತು ತಮಗಾದ ಅನುಭವ ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 5.1 ಸಾವಿರ ಲೈಕ್ಸ್, ಸುಮಾರು 2,000 ಕ್ಕಿಂತಲೂ ಹೆಚ್ಚು ರೀಟ್ವೀಟ್​ ಈ ಪೋಸ್ಟ್ ಒಳಗೊಂಡಿದೆ.

ಏನಂತೀರಿ ಪಿಝಾ ಪ್ರಿಯರೇ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ