AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ
ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್
Follow us
TV9 Web
| Updated By: ganapathi bhat

Updated on:Aug 23, 2021 | 12:32 PM

ಬಹುರಾಷ್ಟ್ರೀಯ ಪಿಜ್ಝಾ ಕಂಪೆನಿ ಡಾಮಿನೋಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ವ್ಯಕ್ತವಾಗಿದೆ. ಪಿಜ್ಝಾ ಡೆಲಿವರಿ ಬಾಯ್‌ಯನ್ನು ಹೀಗೆ ಬಳಸಿಕೊಂಡಿರುವುದು ಕೆಲವರು ಸರಿ ಎಂದು ಮತ್ತೆ ಕೆಲವರು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ನಡೆದ ಘಟನೆ ಏನು ಎಂಬ ವಿವರ ಇಲ್ಲಿದೆ.‌ ಕೋಲ್ಕತ್ತಾದಲ್ಲಿ ಸುರಿದ ಭಾರೀ ಮಳೆಯ ನಡುವೆಯೂ ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್ ತನ್ನ ಗ್ರಾಹಕನಿಗೆ ಪಿಜ್ಝಾ ಡೆಲಿವರಿ ಮಾಡಿದ್ದಾನೆ‌. ಅಂಥಾ ಮಳೆಯಲ್ಲೂ ಸೇವೆ ಒದಗಿಸಿರುವುದಕ್ಕೆ ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್‌ ಫೊಟೊ ಹಂಚಿಕೊಂಡು ಅಭಿನಂದಿಸಿದೆ. ಆದರೆ, ನೆಟ್ಟಿಗರಲ್ಲಿ ಈ ಬಗ್ಗೆ ಪರ-ವಿರೋಧದ ಅಭಿಪ್ರಾಯ ಕೇಳಿಬಂದಿದೆ.

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ. ಸೈನಿಕನು ಯಾವತ್ತೂ ಆಫ್ ಡ್ಯೂಟಿಯಲ್ಲಿ ಇರುವುದಿಲ್ಲ. ನಮ್ಮವರು ಬಿಸಿಯಾದ, ಶುಚಿಯಾದ, ರುಚಿಯಾದ ಆಹಾರ ಒದಗಿಸುತ್ತಾರೆ. ನಾವು ನಮ್ಮ ಫುಡ್ ಡೆಲಿವರಿ ಬಾಯ್ ಶೊವೊನ್ ಘೋಶ್‌ಗೆ, ಕಠಿಣ ಪರಿಸ್ಥಿತಿಯಲ್ಲೂ ಆಹಾರ ಒದಗಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಾಮಿನೋಸ್ ಸಂಸ್ಥೆ ತನ್ನ ಟ್ವೀಟ್‌ನಲ್ಲಿ ಹೇಳಿದೆ. #DominosFoodSloldier ಎಂಬ ಹ್ಯಾಷ್ ಟ್ಯಾಗ್‌ನ್ನು ಕೂಡ ಬಳಕೆ ಮಾಡಿದೆ.

ಈ ಟ್ವೀಟ್‌ಗೆ ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಕಾರ್ಮಿಕ ಕಾನೂನಿನ ಉಲ್ಲಂಘನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದರಲ್ಲಿ ಹೆಮ್ಮೆ ಪಡುವಂಥದ್ದು ಏನೂ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಆತನನ್ನು ಅಭಿನಂದಿಸಿ ಬರೆದುಕೊಂಡಿದ್ದಾರೆ. ತನ್ನ ಕೆಲಸದ ಬಗ್ಗೆ ಡೆಲಿವರಿ ಬಾಯ್‌ಗೆ ಇರುವ ಶ್ರದ್ಧೆಯನ್ನು ಕೆಲವರು ಕೊಂಡಾಡಿದ್ದಾರೆ.

ಈ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಇದನ್ನೂ ಓದಿ: ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್, ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್

ಅಮೆಜಾನ್​ನ ಡೆಲಿವರಿ ಸಿಬ್ಬಂದಿಯಿಂದ ದೇಶದಾದ್ಯಂತ ಒಂದು ದಿನದ ಮುಷ್ಕರಕ್ಕೆ ಸಿದ್ಧತೆ

Published On - 7:31 pm, Fri, 14 May 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್