AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ
ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್
TV9 Web
| Edited By: |

Updated on:Aug 23, 2021 | 12:32 PM

Share

ಬಹುರಾಷ್ಟ್ರೀಯ ಪಿಜ್ಝಾ ಕಂಪೆನಿ ಡಾಮಿನೋಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ವ್ಯಕ್ತವಾಗಿದೆ. ಪಿಜ್ಝಾ ಡೆಲಿವರಿ ಬಾಯ್‌ಯನ್ನು ಹೀಗೆ ಬಳಸಿಕೊಂಡಿರುವುದು ಕೆಲವರು ಸರಿ ಎಂದು ಮತ್ತೆ ಕೆಲವರು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ನಡೆದ ಘಟನೆ ಏನು ಎಂಬ ವಿವರ ಇಲ್ಲಿದೆ.‌ ಕೋಲ್ಕತ್ತಾದಲ್ಲಿ ಸುರಿದ ಭಾರೀ ಮಳೆಯ ನಡುವೆಯೂ ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್ ತನ್ನ ಗ್ರಾಹಕನಿಗೆ ಪಿಜ್ಝಾ ಡೆಲಿವರಿ ಮಾಡಿದ್ದಾನೆ‌. ಅಂಥಾ ಮಳೆಯಲ್ಲೂ ಸೇವೆ ಒದಗಿಸಿರುವುದಕ್ಕೆ ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್‌ ಫೊಟೊ ಹಂಚಿಕೊಂಡು ಅಭಿನಂದಿಸಿದೆ. ಆದರೆ, ನೆಟ್ಟಿಗರಲ್ಲಿ ಈ ಬಗ್ಗೆ ಪರ-ವಿರೋಧದ ಅಭಿಪ್ರಾಯ ಕೇಳಿಬಂದಿದೆ.

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ. ಸೈನಿಕನು ಯಾವತ್ತೂ ಆಫ್ ಡ್ಯೂಟಿಯಲ್ಲಿ ಇರುವುದಿಲ್ಲ. ನಮ್ಮವರು ಬಿಸಿಯಾದ, ಶುಚಿಯಾದ, ರುಚಿಯಾದ ಆಹಾರ ಒದಗಿಸುತ್ತಾರೆ. ನಾವು ನಮ್ಮ ಫುಡ್ ಡೆಲಿವರಿ ಬಾಯ್ ಶೊವೊನ್ ಘೋಶ್‌ಗೆ, ಕಠಿಣ ಪರಿಸ್ಥಿತಿಯಲ್ಲೂ ಆಹಾರ ಒದಗಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಾಮಿನೋಸ್ ಸಂಸ್ಥೆ ತನ್ನ ಟ್ವೀಟ್‌ನಲ್ಲಿ ಹೇಳಿದೆ. #DominosFoodSloldier ಎಂಬ ಹ್ಯಾಷ್ ಟ್ಯಾಗ್‌ನ್ನು ಕೂಡ ಬಳಕೆ ಮಾಡಿದೆ.

ಈ ಟ್ವೀಟ್‌ಗೆ ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಕಾರ್ಮಿಕ ಕಾನೂನಿನ ಉಲ್ಲಂಘನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದರಲ್ಲಿ ಹೆಮ್ಮೆ ಪಡುವಂಥದ್ದು ಏನೂ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಆತನನ್ನು ಅಭಿನಂದಿಸಿ ಬರೆದುಕೊಂಡಿದ್ದಾರೆ. ತನ್ನ ಕೆಲಸದ ಬಗ್ಗೆ ಡೆಲಿವರಿ ಬಾಯ್‌ಗೆ ಇರುವ ಶ್ರದ್ಧೆಯನ್ನು ಕೆಲವರು ಕೊಂಡಾಡಿದ್ದಾರೆ.

ಈ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಇದನ್ನೂ ಓದಿ: ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್, ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್

ಅಮೆಜಾನ್​ನ ಡೆಲಿವರಿ ಸಿಬ್ಬಂದಿಯಿಂದ ದೇಶದಾದ್ಯಂತ ಒಂದು ದಿನದ ಮುಷ್ಕರಕ್ಕೆ ಸಿದ್ಧತೆ

Published On - 7:31 pm, Fri, 14 May 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್