AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ.

ಜಡಿ ಮಳೆಯನ್ನೂ ಲೆಕ್ಕಿಸದೆ ಪಿಜ್ಝಾ ಡೆಲಿವರಿ; ಟ್ವಿಟರ್​ನಲ್ಲಿ ಜೋರಾಯ್ತು ಪರ-ವಿರೋಧ ಚರ್ಚೆ
ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್
TV9 Web
| Edited By: |

Updated on:Aug 23, 2021 | 12:32 PM

Share

ಬಹುರಾಷ್ಟ್ರೀಯ ಪಿಜ್ಝಾ ಕಂಪೆನಿ ಡಾಮಿನೋಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ವ್ಯಕ್ತವಾಗಿದೆ. ಪಿಜ್ಝಾ ಡೆಲಿವರಿ ಬಾಯ್‌ಯನ್ನು ಹೀಗೆ ಬಳಸಿಕೊಂಡಿರುವುದು ಕೆಲವರು ಸರಿ ಎಂದು ಮತ್ತೆ ಕೆಲವರು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ನಡೆದ ಘಟನೆ ಏನು ಎಂಬ ವಿವರ ಇಲ್ಲಿದೆ.‌ ಕೋಲ್ಕತ್ತಾದಲ್ಲಿ ಸುರಿದ ಭಾರೀ ಮಳೆಯ ನಡುವೆಯೂ ಡಾಮಿನೋಸ್ ಪಿಜ್ಝಾ ಡೆಲಿವರಿ ಬಾಯ್ ತನ್ನ ಗ್ರಾಹಕನಿಗೆ ಪಿಜ್ಝಾ ಡೆಲಿವರಿ ಮಾಡಿದ್ದಾನೆ‌. ಅಂಥಾ ಮಳೆಯಲ್ಲೂ ಸೇವೆ ಒದಗಿಸಿರುವುದಕ್ಕೆ ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್‌ ಫೊಟೊ ಹಂಚಿಕೊಂಡು ಅಭಿನಂದಿಸಿದೆ. ಆದರೆ, ನೆಟ್ಟಿಗರಲ್ಲಿ ಈ ಬಗ್ಗೆ ಪರ-ವಿರೋಧದ ಅಭಿಪ್ರಾಯ ಕೇಳಿಬಂದಿದೆ.

ಡಾಮಿನೋಸ್ ಸಂಸ್ಥೆ ಡೆಲಿವರಿ ಬಾಯ್ ಶೊವೊನ್ ಘೋಶ್, ಕೋಲ್ಕತ್ತಾದಲ್ಲಿ ಸುರಿದ ಮಳೆಯನ್ನೂ ಲೆಕ್ಕಿಸದೆ, ಮಳೆ ನೀರಿನಿಂದ ತುಂಬಿಹೋದ ರಸ್ತೆಯಲ್ಲಿ ನಿಂತಿರುವ ಫೊಟೊ ಹಂಚಿಕೊಂಡಿದೆ. ಆ ಮೂಲಕ ಆತನಿಗೆ ಅಭಿನಂದನೆ ಸಲ್ಲಿಸಿದೆ. ಸೈನಿಕನು ಯಾವತ್ತೂ ಆಫ್ ಡ್ಯೂಟಿಯಲ್ಲಿ ಇರುವುದಿಲ್ಲ. ನಮ್ಮವರು ಬಿಸಿಯಾದ, ಶುಚಿಯಾದ, ರುಚಿಯಾದ ಆಹಾರ ಒದಗಿಸುತ್ತಾರೆ. ನಾವು ನಮ್ಮ ಫುಡ್ ಡೆಲಿವರಿ ಬಾಯ್ ಶೊವೊನ್ ಘೋಶ್‌ಗೆ, ಕಠಿಣ ಪರಿಸ್ಥಿತಿಯಲ್ಲೂ ಆಹಾರ ಒದಗಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಾಮಿನೋಸ್ ಸಂಸ್ಥೆ ತನ್ನ ಟ್ವೀಟ್‌ನಲ್ಲಿ ಹೇಳಿದೆ. #DominosFoodSloldier ಎಂಬ ಹ್ಯಾಷ್ ಟ್ಯಾಗ್‌ನ್ನು ಕೂಡ ಬಳಕೆ ಮಾಡಿದೆ.

ಈ ಟ್ವೀಟ್‌ಗೆ ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಕಾರ್ಮಿಕ ಕಾನೂನಿನ ಉಲ್ಲಂಘನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದರಲ್ಲಿ ಹೆಮ್ಮೆ ಪಡುವಂಥದ್ದು ಏನೂ ಇಲ್ಲ ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಆತನನ್ನು ಅಭಿನಂದಿಸಿ ಬರೆದುಕೊಂಡಿದ್ದಾರೆ. ತನ್ನ ಕೆಲಸದ ಬಗ್ಗೆ ಡೆಲಿವರಿ ಬಾಯ್‌ಗೆ ಇರುವ ಶ್ರದ್ಧೆಯನ್ನು ಕೆಲವರು ಕೊಂಡಾಡಿದ್ದಾರೆ.

ಈ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಇದನ್ನೂ ಓದಿ: ವಾಗ್ವಾದಕ್ಕಿಳಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್, ಫುಡ್ ಡೆಲಿವರಿ ಬಾಯ್ಸ್ಗೆ ಖಡಕ್ ವಾರ್ನಿಂಗ್

ಅಮೆಜಾನ್​ನ ಡೆಲಿವರಿ ಸಿಬ್ಬಂದಿಯಿಂದ ದೇಶದಾದ್ಯಂತ ಒಂದು ದಿನದ ಮುಷ್ಕರಕ್ಕೆ ಸಿದ್ಧತೆ

Published On - 7:31 pm, Fri, 14 May 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ