AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಲೋ ಎಂಚ ಉಲ್ಲರ್, ಇಂಡೋನೇಷ್ಯಾದಲ್ಲಿ  ತುಳು ಮಾತನಾಡಿದ ಡಾ. ಬ್ರೋ 

ಡಾ. ಬ್ರೋ ನಿನ್ನೆಯಷ್ಟೇ ತಮ್ಮ ಯೂಟ್ಯೂಬ್ ಚಾನೆಲ್ ಅಲ್ಲಿ ಇಂಡೋನೇಷ್ಯಾ ಪ್ರವಾಸದ ವ್ಲೋಗ್ ಒಂದನ್ನು ಹಂಚಿಕೊಂಡಿದ್ದರು.  ಆ ವಿಡಿಯೋದಲ್ಲಿ ಅವರು ವಿದೇಶಿಗರೊಂದಿಗೆ ತುಳು ಭಾಷೆಯಲ್ಲಿ ಮಾತನಾಡಿದ್ದನ್ನು ಕಾಣಬಹುದು.  ತುಳು ಭಾಷೆಯಲ್ಲಿ ಮಾತನಾಡಿದ ಈ ವಿಡಿಯೋ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಹಲೋ ಎಂಚ ಉಲ್ಲರ್, ಇಂಡೋನೇಷ್ಯಾದಲ್ಲಿ  ತುಳು ಮಾತನಾಡಿದ ಡಾ. ಬ್ರೋ 
ಮಾಲಾಶ್ರೀ ಅಂಚನ್​
| Edited By: |

Updated on: May 10, 2024 | 5:35 PM

Share

ಕನ್ನಡಿಗರ ಅಚ್ಚುಮೆಚ್ಚಿನ ಯುಟ್ಯೂಬರ್‌ಗಳಲ್ಲಿ ಡಾ. ಬ್ರೋ ಖ್ಯಾತಿಯ ಯೂಟ್ಯೂಬರ್‌ ಗಗನ್‌ ಶ್ರೀನಿವಾಸ್‌ ತುಂಬಾನೇ ಜನಪ್ರಿಯರು. ಇವರು ಕನ್ನಡಿಗರ ಅಚ್ಚುಮೆಚ್ಚಿನ ಯೂಟ್ಯೂಬರ್‌ ಅಂತಾನೇ ಹೇಳ್ಬೋದು. ʼನಮಸ್ಕಾರ ದೇವ್ರುʼ ಎಂದು ವಿವಿಧ ದೇಶಗಳನ್ನು ಸುತ್ತಿ  ಅಲ್ಲಿನ  ಅಲ್ಲಿನ ವಿಶೇಷತೆಗಳ ಕುರಿತು ಅಚ್ಚ ಕನ್ನಡದಲ್ಲಿ ಸ್ವಚ್ಛವಾಗಿ ಮಾಹಿತಿ ನೀಡುವ ಇವರ ಚಾನೆಲ್‌ ಗೆ ಸಾಕಷ್ಟು ವೀಕ್ಷಕರಿದ್ದಾರೆ. ಇದೀಗ ಅವರು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ  ತಮ್ಮ ಇಂಡೋನೇಷ್ಯಾ ಪ್ರವಾಸದ ವ್ಲೋಗ್‌ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ವಿದೇಶಿಗರೊಂದಿಗೆ ಡಾ. ಬ್ರೋ ತುಳು ಭಾಷೆಯಲ್ಲಿ ಮಾತನಾಡಿರುವಂತಹ ವಿಡಿಯೋ ತುಣುಕುಗಳು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿವೆ.

ಈ ಕುರಿತ ವಿಡಿಯೋ ತುಣುಕೊಂದನ್ನು ತುಳು ಕಂಟೆಂಟ್‌ ಕ್ರಿಯೇಟರ್‌ ಶರಣ್‌ ಚಿಲಿಂಬಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆ (@the_powerhouse_vines) ಯಲ್ಲಿ ಹಂಚಿಕೊಂಡಿದ್ದಾರೆ. ಕೆಲ ಸಮಯಗಳ ಹಿಂದೆ ಡಾ. ಬ್ರೋ ಮಂಗಳೂರಿಗೆ ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ಶರಣ್‌ ಚಿಲಿಂಬಿ ಎಂಚ ಉಲ್ಲರ್‌ (ಹೇಗಿದ್ದೀರಿ) ಎಂಬ ತುಳು ಪದವನ್ನು ಕಲಿಸಿಕೊಟ್ಟಿದ್ದರು.  ಇದೀಗ ಇಂಡೋನೇಷ್ಯಾದಲ್ಲಿಯೂ ಡಾ. ಬ್ರೋ How are you ಬದಲಿಗೆ ಎಂಚ ಉಲ್ಲರ್‌ ಎಂದು ತುಳು ಭಾಷೆಯಲ್ಲಿ ಮಾತನಾಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಇಂಡೋನೇಷ್ಯಾದಲ್ಲಿ ಡಾ. ಬ್ರೋ ಗಾಡಿಯಲ್ಲಿ ಹೋಗುತ್ತಿರುವಾಗ ಅಲ್ಲಿನ ಸ್ಥಳೀಯರಿಗೆ ಕೈಬೀಸಿ ಹಲೋ… ಎಂಚ ಉಲ್ಲರ್‌… ಎಂಚ ಉಲ್ಲರ್‌ ಎಂದು  ತುಳುವಿನಲ್ಲಿ  ಮಾತನಾಡಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಸಂತೋಷ, ಆರೋಗ್ಯ ವೃದ್ಧಿಗಾಗಿ ಮುಖಕ್ಕೆ ಮಸಿ ಬಳಿದು ಸಂಭ್ರಮಿಸುತ್ತಾರೆ ಇಲ್ಲಿನ ಜನ 

ಇಂದು ಮಧ್ಯಾಹ್ನ ಹಂಚಿಕೊಳ್ಳಲಾದ ಈ ವಿಡಿಯೋ 10 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಡಾ. ಬ್ರೋ ಅವರ ತುಳು ಭಾಷೆಯನ್ನು ಕೇಳಿ ನೆಟ್ಟಿಗರು ಫುಲ್‌ ಖುಷಿಯಾಗಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ