AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ

ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್‌ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್‌ ಸುದ್ದಿಯಲ್ಲಿರುತ್ತಾರೆ. ಇದೀಗ ಇವರು ಮತ್ತೊಮ್ಮೆ ಸುದ್ದಿಯಲ್ಲಿದ್ದು, ಗಣೇಶ ಕೂರಿಸಲು ಹಣ ಕೇಳಿದ್ರೆ ಮುಖ ತಿರುಗಿಸಿ ಹೋಗುವವರ ಮಧ್ಯೆ ಡಾ. ಮಂಜುನಾಥ್‌ ಅವರು ತಮ್ಮ ಬಳಿ ಗಣೆಶ ಕಲೆಕ್ಷನ್‌ಗೆ ಬಂದ ಮಕ್ಕಳ ಜೊತೆ ಮೃದುವಾಗಿ ಮಾತನಾಡಿ ಹಣ ಕೊಟ್ಟು ಕಳುಹಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 06, 2024 | 11:36 AM

Share

ಗೌರಿ ಗಣೇಶ ಹಬ್ಬ ಬಂದೇ ಬಿಟ್ಟಿದೆ. ದೇಶದೆಲ್ಲೆಡೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಕೂರಿಸಿ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಸಾವರ್ಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಚಂದಾ ವಸೂಲಿ ಮಾಡುವುದು ಸಾಮಾನ್ಯ. ಅದರಲ್ಲೂ ಮಕ್ಕಳಂತೂ ಬಹಳ ಉತ್ಸಾಹದಿಂದ ಮನೆ ಮನೆಗಳಿಗೆ, ಹೋಗಿ ಗಲ್ಲಿ ಗಲ್ಲಿಗಳಲ್ಲೂ ತಿರುಗಾಡುತ್ತಾ ಗಣೇಶ ಕಲೆಕ್ಷನ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಮಕ್ಕಳ ಸೈನ್ಯ ಈ ಬಾರಿ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿಯೇ ಹಣ ಕೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಹೇಮಂತ್‌ (Hemanth Virat) ಎಂಬವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮಕ್ಕಳ ಸೈನ್ಯ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿ ಹಣ ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ಗಣೇಶ ಕಲೆಕ್ಷನ್‌ಗೆ ಬಂದ ಮಕ್ಕಳಿಗೆ 500 ರೂ. ಕೊಟ್ಟು ಚೆನ್ನಾಗಿ ಓದ್ಬೇಕು ಕಣ್ರೋ ಅಂತ ಹೇಳಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಅಂಗಡಿಗೆ ಬಂದ ಪುಟ್ಟ ಬಾಲಕಿಯ ಖಾಸಗಿ ಅಂಗ ಮುಟ್ಟಿದ 70 ರ ಮುದುಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸೂಪರ್‌ ಡಾಕ್ಟ್ರೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼತುಂಬಾ ಒಳ್ಳೆಯ ಕೆಲಸʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ