AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್

School Bus : ಚಾಲಕ ಬಸ್ ಓಡಿಸುತ್ತಲೇ ಅಸ್ವಸ್ಥನಾಗತೊಡಗುತ್ತಾನೆ. ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಗಾಬರಿಯಿಂದ ಚೀರಾಡುತ್ತಾರೆ. ಆದರೆ ಒಬ್ಬ ಬಾಲಕ ಮಾತ್ರ ಸಾಹಸ ಮೆರೆಯುತ್ತಾನೆ.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್
ಪ್ರಜ್ಞೆತಪ್ಪಿ ಬಿದ್ದ ಚಾಲಕ, ಬಸ್​ ನಿಯಂತ್ರಿಸುತ್ತಿರುವ ಬಾಲಕ
Follow us
ಶ್ರೀದೇವಿ ಕಳಸದ
| Updated By: Digi Tech Desk

Updated on:May 02, 2023 | 1:54 PM

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮಿಚಿಗನ್​ನಲ್ಲಿರುವ ವಾರನ್​ ಕನ್ಸಾಲಿಡೇಟೆಡ್​ ಶಾಲೆಯು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದೆ. ಡೈಲನ್​ ರೀವ್ಸ್​ ಬರ್ನೆಟ್​ ರಸ್ತೆಯ ಬಳಿ ಇರುವ ಮೆಸೋನಿಕ್​ ಬೌಲೆವಾರ್ಡ್​ನಲ್ಲಿ ಈ ಘಟನೆ ಸಂಭವಿಸಿದೆ. ಬಸ್​ ಡ್ರೈವರ್ ಪ್ರಜ್ಞೆ ತಪ್ಪುತ್ತಿರುವಂತೆ ಬಸ್ಸಿನಲ್ಲಿದ್ದ ಏಳನೇ ತರಗತಿಯ ಬಾಲಕ ಸಮಯಪ್ರಜ್ಞೆಯಿಂದ ವರ್ತಿಸಿ 66 ಜನರ ಜೀವವನ್ನು ಉಳಿಸಿದ್ದಾನೆ.

ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಬಸ್ ಸಾಗುತ್ತಿತ್ತು. ಇದ್ದಕ್ಕಿದ್ದಂತೆ ಡ್ರೈವರ್​ ಅಸ್ವಸ್ಥನಾಗಿದ್ದಾನೆ. ಇದನ್ನು ಗಮನಿಸಿದ ಈ ಬಾಲಕ ಬಸ್​ ಅಪಘಾತಕ್ಕೆ ಒಳಗಾಗದಂತೆ ನಿಯಂತ್ರಿಸಿದ್ದಾನೆ. ಇವನ ಸಮಯ ಪ್ರಜ್ಞೆ, ಗಮನಿಸುವಿಕೆ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡ ರೀತಿಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

ಈ ವಿಡಿಯೋ ಸುಮಾರು 53 ಸೆಕೆಂಡುಗಳದ್ದು. ಡ್ರೈವರ್ ಪ್ರಜ್ಞೆ ತಪ್ಪುವ ಮೊದಲು ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಗಾಬರಿಗೊಂಡ ಪ್ರಯಾಣಿಕರು ಅರಚತೊಡಗುತ್ತಾರೆ. ಆದರೆ ಈ ಬಾಲಕ ಮಾತ್ರ ಧೈರ್ಯದಿಂದ ಮುನ್ನುಗ್ಗಿ ಬಸ್​ ಅನ್ನು ನಿಯಂತ್ರಿಸಿ ನಿಲ್ಲಿಸುತ್ತಾನೆ.

ಇದನ್ನೂ ಓದಿ : Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

ಶಾಲಾಸಿಬ್ಬಂದಿಯು ಈ ಹುಡುಗನ ಸಾಹಸವನ್ನು ಶ್ಲಾಘಿಸಿ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದೆ. ನೆಟ್ಟಿಗರು ಈತನನ್ನು ಕೊಂಡಾಡುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Tue, 2 May 23

ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್