AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್

School Bus : ಚಾಲಕ ಬಸ್ ಓಡಿಸುತ್ತಲೇ ಅಸ್ವಸ್ಥನಾಗತೊಡಗುತ್ತಾನೆ. ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಗಾಬರಿಯಿಂದ ಚೀರಾಡುತ್ತಾರೆ. ಆದರೆ ಒಬ್ಬ ಬಾಲಕ ಮಾತ್ರ ಸಾಹಸ ಮೆರೆಯುತ್ತಾನೆ.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್
ಪ್ರಜ್ಞೆತಪ್ಪಿ ಬಿದ್ದ ಚಾಲಕ, ಬಸ್​ ನಿಯಂತ್ರಿಸುತ್ತಿರುವ ಬಾಲಕ
ಶ್ರೀದೇವಿ ಕಳಸದ
| Edited By: |

Updated on:May 02, 2023 | 1:54 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮಿಚಿಗನ್​ನಲ್ಲಿರುವ ವಾರನ್​ ಕನ್ಸಾಲಿಡೇಟೆಡ್​ ಶಾಲೆಯು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದೆ. ಡೈಲನ್​ ರೀವ್ಸ್​ ಬರ್ನೆಟ್​ ರಸ್ತೆಯ ಬಳಿ ಇರುವ ಮೆಸೋನಿಕ್​ ಬೌಲೆವಾರ್ಡ್​ನಲ್ಲಿ ಈ ಘಟನೆ ಸಂಭವಿಸಿದೆ. ಬಸ್​ ಡ್ರೈವರ್ ಪ್ರಜ್ಞೆ ತಪ್ಪುತ್ತಿರುವಂತೆ ಬಸ್ಸಿನಲ್ಲಿದ್ದ ಏಳನೇ ತರಗತಿಯ ಬಾಲಕ ಸಮಯಪ್ರಜ್ಞೆಯಿಂದ ವರ್ತಿಸಿ 66 ಜನರ ಜೀವವನ್ನು ಉಳಿಸಿದ್ದಾನೆ.

ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಬಸ್ ಸಾಗುತ್ತಿತ್ತು. ಇದ್ದಕ್ಕಿದ್ದಂತೆ ಡ್ರೈವರ್​ ಅಸ್ವಸ್ಥನಾಗಿದ್ದಾನೆ. ಇದನ್ನು ಗಮನಿಸಿದ ಈ ಬಾಲಕ ಬಸ್​ ಅಪಘಾತಕ್ಕೆ ಒಳಗಾಗದಂತೆ ನಿಯಂತ್ರಿಸಿದ್ದಾನೆ. ಇವನ ಸಮಯ ಪ್ರಜ್ಞೆ, ಗಮನಿಸುವಿಕೆ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡ ರೀತಿಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

ಈ ವಿಡಿಯೋ ಸುಮಾರು 53 ಸೆಕೆಂಡುಗಳದ್ದು. ಡ್ರೈವರ್ ಪ್ರಜ್ಞೆ ತಪ್ಪುವ ಮೊದಲು ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಗಾಬರಿಗೊಂಡ ಪ್ರಯಾಣಿಕರು ಅರಚತೊಡಗುತ್ತಾರೆ. ಆದರೆ ಈ ಬಾಲಕ ಮಾತ್ರ ಧೈರ್ಯದಿಂದ ಮುನ್ನುಗ್ಗಿ ಬಸ್​ ಅನ್ನು ನಿಯಂತ್ರಿಸಿ ನಿಲ್ಲಿಸುತ್ತಾನೆ.

ಇದನ್ನೂ ಓದಿ : Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

ಶಾಲಾಸಿಬ್ಬಂದಿಯು ಈ ಹುಡುಗನ ಸಾಹಸವನ್ನು ಶ್ಲಾಘಿಸಿ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದೆ. ನೆಟ್ಟಿಗರು ಈತನನ್ನು ಕೊಂಡಾಡುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Tue, 2 May 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್