AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್

School Bus : ಚಾಲಕ ಬಸ್ ಓಡಿಸುತ್ತಲೇ ಅಸ್ವಸ್ಥನಾಗತೊಡಗುತ್ತಾನೆ. ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಗಾಬರಿಯಿಂದ ಚೀರಾಡುತ್ತಾರೆ. ಆದರೆ ಒಬ್ಬ ಬಾಲಕ ಮಾತ್ರ ಸಾಹಸ ಮೆರೆಯುತ್ತಾನೆ.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್
ಪ್ರಜ್ಞೆತಪ್ಪಿ ಬಿದ್ದ ಚಾಲಕ, ಬಸ್​ ನಿಯಂತ್ರಿಸುತ್ತಿರುವ ಬಾಲಕ
ಶ್ರೀದೇವಿ ಕಳಸದ
| Edited By: |

Updated on:May 02, 2023 | 1:54 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮಿಚಿಗನ್​ನಲ್ಲಿರುವ ವಾರನ್​ ಕನ್ಸಾಲಿಡೇಟೆಡ್​ ಶಾಲೆಯು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದೆ. ಡೈಲನ್​ ರೀವ್ಸ್​ ಬರ್ನೆಟ್​ ರಸ್ತೆಯ ಬಳಿ ಇರುವ ಮೆಸೋನಿಕ್​ ಬೌಲೆವಾರ್ಡ್​ನಲ್ಲಿ ಈ ಘಟನೆ ಸಂಭವಿಸಿದೆ. ಬಸ್​ ಡ್ರೈವರ್ ಪ್ರಜ್ಞೆ ತಪ್ಪುತ್ತಿರುವಂತೆ ಬಸ್ಸಿನಲ್ಲಿದ್ದ ಏಳನೇ ತರಗತಿಯ ಬಾಲಕ ಸಮಯಪ್ರಜ್ಞೆಯಿಂದ ವರ್ತಿಸಿ 66 ಜನರ ಜೀವವನ್ನು ಉಳಿಸಿದ್ದಾನೆ.

ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಬಸ್ ಸಾಗುತ್ತಿತ್ತು. ಇದ್ದಕ್ಕಿದ್ದಂತೆ ಡ್ರೈವರ್​ ಅಸ್ವಸ್ಥನಾಗಿದ್ದಾನೆ. ಇದನ್ನು ಗಮನಿಸಿದ ಈ ಬಾಲಕ ಬಸ್​ ಅಪಘಾತಕ್ಕೆ ಒಳಗಾಗದಂತೆ ನಿಯಂತ್ರಿಸಿದ್ದಾನೆ. ಇವನ ಸಮಯ ಪ್ರಜ್ಞೆ, ಗಮನಿಸುವಿಕೆ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡ ರೀತಿಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

ಈ ವಿಡಿಯೋ ಸುಮಾರು 53 ಸೆಕೆಂಡುಗಳದ್ದು. ಡ್ರೈವರ್ ಪ್ರಜ್ಞೆ ತಪ್ಪುವ ಮೊದಲು ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಗಾಬರಿಗೊಂಡ ಪ್ರಯಾಣಿಕರು ಅರಚತೊಡಗುತ್ತಾರೆ. ಆದರೆ ಈ ಬಾಲಕ ಮಾತ್ರ ಧೈರ್ಯದಿಂದ ಮುನ್ನುಗ್ಗಿ ಬಸ್​ ಅನ್ನು ನಿಯಂತ್ರಿಸಿ ನಿಲ್ಲಿಸುತ್ತಾನೆ.

ಇದನ್ನೂ ಓದಿ : Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

ಶಾಲಾಸಿಬ್ಬಂದಿಯು ಈ ಹುಡುಗನ ಸಾಹಸವನ್ನು ಶ್ಲಾಘಿಸಿ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದೆ. ನೆಟ್ಟಿಗರು ಈತನನ್ನು ಕೊಂಡಾಡುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Tue, 2 May 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು