AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್

School Bus : ಚಾಲಕ ಬಸ್ ಓಡಿಸುತ್ತಲೇ ಅಸ್ವಸ್ಥನಾಗತೊಡಗುತ್ತಾನೆ. ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಗಾಬರಿಯಿಂದ ಚೀರಾಡುತ್ತಾರೆ. ಆದರೆ ಒಬ್ಬ ಬಾಲಕ ಮಾತ್ರ ಸಾಹಸ ಮೆರೆಯುತ್ತಾನೆ.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್
ಪ್ರಜ್ಞೆತಪ್ಪಿ ಬಿದ್ದ ಚಾಲಕ, ಬಸ್​ ನಿಯಂತ್ರಿಸುತ್ತಿರುವ ಬಾಲಕ
ಶ್ರೀದೇವಿ ಕಳಸದ
| Edited By: |

Updated on:May 02, 2023 | 1:54 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮಿಚಿಗನ್​ನಲ್ಲಿರುವ ವಾರನ್​ ಕನ್ಸಾಲಿಡೇಟೆಡ್​ ಶಾಲೆಯು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದೆ. ಡೈಲನ್​ ರೀವ್ಸ್​ ಬರ್ನೆಟ್​ ರಸ್ತೆಯ ಬಳಿ ಇರುವ ಮೆಸೋನಿಕ್​ ಬೌಲೆವಾರ್ಡ್​ನಲ್ಲಿ ಈ ಘಟನೆ ಸಂಭವಿಸಿದೆ. ಬಸ್​ ಡ್ರೈವರ್ ಪ್ರಜ್ಞೆ ತಪ್ಪುತ್ತಿರುವಂತೆ ಬಸ್ಸಿನಲ್ಲಿದ್ದ ಏಳನೇ ತರಗತಿಯ ಬಾಲಕ ಸಮಯಪ್ರಜ್ಞೆಯಿಂದ ವರ್ತಿಸಿ 66 ಜನರ ಜೀವವನ್ನು ಉಳಿಸಿದ್ದಾನೆ.

ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಬಸ್ ಸಾಗುತ್ತಿತ್ತು. ಇದ್ದಕ್ಕಿದ್ದಂತೆ ಡ್ರೈವರ್​ ಅಸ್ವಸ್ಥನಾಗಿದ್ದಾನೆ. ಇದನ್ನು ಗಮನಿಸಿದ ಈ ಬಾಲಕ ಬಸ್​ ಅಪಘಾತಕ್ಕೆ ಒಳಗಾಗದಂತೆ ನಿಯಂತ್ರಿಸಿದ್ದಾನೆ. ಇವನ ಸಮಯ ಪ್ರಜ್ಞೆ, ಗಮನಿಸುವಿಕೆ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡ ರೀತಿಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

ಈ ವಿಡಿಯೋ ಸುಮಾರು 53 ಸೆಕೆಂಡುಗಳದ್ದು. ಡ್ರೈವರ್ ಪ್ರಜ್ಞೆ ತಪ್ಪುವ ಮೊದಲು ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಗಾಬರಿಗೊಂಡ ಪ್ರಯಾಣಿಕರು ಅರಚತೊಡಗುತ್ತಾರೆ. ಆದರೆ ಈ ಬಾಲಕ ಮಾತ್ರ ಧೈರ್ಯದಿಂದ ಮುನ್ನುಗ್ಗಿ ಬಸ್​ ಅನ್ನು ನಿಯಂತ್ರಿಸಿ ನಿಲ್ಲಿಸುತ್ತಾನೆ.

ಇದನ್ನೂ ಓದಿ : Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

ಶಾಲಾಸಿಬ್ಬಂದಿಯು ಈ ಹುಡುಗನ ಸಾಹಸವನ್ನು ಶ್ಲಾಘಿಸಿ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದೆ. ನೆಟ್ಟಿಗರು ಈತನನ್ನು ಕೊಂಡಾಡುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Tue, 2 May 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ