AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್

School Bus : ಚಾಲಕ ಬಸ್ ಓಡಿಸುತ್ತಲೇ ಅಸ್ವಸ್ಥನಾಗತೊಡಗುತ್ತಾನೆ. ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಗಾಬರಿಯಿಂದ ಚೀರಾಡುತ್ತಾರೆ. ಆದರೆ ಒಬ್ಬ ಬಾಲಕ ಮಾತ್ರ ಸಾಹಸ ಮೆರೆಯುತ್ತಾನೆ.

ಪ್ರಜ್ಞೆ ತಪ್ಪಿದ ಚಾಲಕ; 66 ಜನರನ್ನು ಉಳಿಸಿದ 7ನೇ ತರಗತಿಯ ಬಾಲಕನ ವಿಡಿಯೋ ವೈರಲ್
ಪ್ರಜ್ಞೆತಪ್ಪಿ ಬಿದ್ದ ಚಾಲಕ, ಬಸ್​ ನಿಯಂತ್ರಿಸುತ್ತಿರುವ ಬಾಲಕ
ಶ್ರೀದೇವಿ ಕಳಸದ
| Edited By: |

Updated on:May 02, 2023 | 1:54 PM

Share

Viral Video : ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮಿಚಿಗನ್​ನಲ್ಲಿರುವ ವಾರನ್​ ಕನ್ಸಾಲಿಡೇಟೆಡ್​ ಶಾಲೆಯು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದೆ. ಡೈಲನ್​ ರೀವ್ಸ್​ ಬರ್ನೆಟ್​ ರಸ್ತೆಯ ಬಳಿ ಇರುವ ಮೆಸೋನಿಕ್​ ಬೌಲೆವಾರ್ಡ್​ನಲ್ಲಿ ಈ ಘಟನೆ ಸಂಭವಿಸಿದೆ. ಬಸ್​ ಡ್ರೈವರ್ ಪ್ರಜ್ಞೆ ತಪ್ಪುತ್ತಿರುವಂತೆ ಬಸ್ಸಿನಲ್ಲಿದ್ದ ಏಳನೇ ತರಗತಿಯ ಬಾಲಕ ಸಮಯಪ್ರಜ್ಞೆಯಿಂದ ವರ್ತಿಸಿ 66 ಜನರ ಜೀವವನ್ನು ಉಳಿಸಿದ್ದಾನೆ.

ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ಬಸ್ ಸಾಗುತ್ತಿತ್ತು. ಇದ್ದಕ್ಕಿದ್ದಂತೆ ಡ್ರೈವರ್​ ಅಸ್ವಸ್ಥನಾಗಿದ್ದಾನೆ. ಇದನ್ನು ಗಮನಿಸಿದ ಈ ಬಾಲಕ ಬಸ್​ ಅಪಘಾತಕ್ಕೆ ಒಳಗಾಗದಂತೆ ನಿಯಂತ್ರಿಸಿದ್ದಾನೆ. ಇವನ ಸಮಯ ಪ್ರಜ್ಞೆ, ಗಮನಿಸುವಿಕೆ, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡ ರೀತಿಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

ಈ ವಿಡಿಯೋ ಸುಮಾರು 53 ಸೆಕೆಂಡುಗಳದ್ದು. ಡ್ರೈವರ್ ಪ್ರಜ್ಞೆ ತಪ್ಪುವ ಮೊದಲು ಯಾರಾದರೂ 911ಗೆ ಕರೆ ಮಾಡಿ ಎಂದು ಕೂಗುತ್ತಾನೆ. ಗಾಬರಿಗೊಂಡ ಪ್ರಯಾಣಿಕರು ಅರಚತೊಡಗುತ್ತಾರೆ. ಆದರೆ ಈ ಬಾಲಕ ಮಾತ್ರ ಧೈರ್ಯದಿಂದ ಮುನ್ನುಗ್ಗಿ ಬಸ್​ ಅನ್ನು ನಿಯಂತ್ರಿಸಿ ನಿಲ್ಲಿಸುತ್ತಾನೆ.

ಇದನ್ನೂ ಓದಿ : Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

ಶಾಲಾಸಿಬ್ಬಂದಿಯು ಈ ಹುಡುಗನ ಸಾಹಸವನ್ನು ಶ್ಲಾಘಿಸಿ ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದೆ. ನೆಟ್ಟಿಗರು ಈತನನ್ನು ಕೊಂಡಾಡುತ್ತಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:30 pm, Tue, 2 May 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​