Viral: ‘ಆನೆ ನನ್ನ ಮನೆ ಧ್ವಂಸ ಮಾಡಿ ನನಗೆ ಜೀವನ ಪಾಠ ಕಲಿಸಿತು’

Wildlife: ಆನೆಯಿಂದಾಗಿ ಕಳೆದ ವರ್ಷ ತನ್ನ ಮನೆಯನ್ನು ಹೇಗೆ ಕಳೆದುಕೊಂಡೆ ಮತ್ತು ಆನಂತರ ಆ ದೈತ್ಯಜೀವಿಯೊಂದಿಗೆ ಹೇಗೆ ಸಹಬಾಳ್ವೆ ಮಾಡಲು ಶುರುಮಾಡಿದೆ ಎನ್ನುವುದನ್ನು ಐಎಫ್‌ಎಸ್ ಮುದಿತ್ ವರ್ಮಾ ಅವರ ವಾಹನ ಚಾಲಕ ಕಮಲ್​, ವರ್ಮಾ ಬಳಿ ಹೇಳಿಕೊಂಡಿದ್ದಾರೆ. ವರ್ಮಾ ಅದನ್ನು X ನಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿದ ನೆಟ್ಟಿಗರು ಗೊಂದಲಕ್ಕೆ ಬಿದ್ದಿದ್ದಾರೆ.

Viral: 'ಆನೆ ನನ್ನ ಮನೆ ಧ್ವಂಸ ಮಾಡಿ ನನಗೆ ಜೀವನ ಪಾಠ ಕಲಿಸಿತು'
ವಾಹನ ಚಾಲಕ ಕಮಲ್
Follow us
|

Updated on: Oct 04, 2023 | 1:50 PM

Elephant: ವನ್ಯಮೃಗಗಳನ್ನು (Wild Animals) ಈವತ್ತು ಅರ್ಥ ಮಾಡಿಕೊಳ್ಳಬೇಕಿರುವುದು ಮನುಷ್ಯನೇ ಹೊರತು ಆ ಪ್ರಾಣಿಗಳಲ್ಲ. ಅವುಗಳ ಉಳಿವಲ್ಲೇ ಮನುಷ್ಯನ ಉಳಿವೂ ಇದೆ ಎನ್ನುವ ಸತ್ಯವನ್ನು ಪ್ರತಿಯೊಬ್ಬರೂ ಇಂದು ತಿಳಿದುಕೊಳ್ಳಬೇಕು. ಕಾಡುಪ್ರಾಣಿಗಳ ಆವಾಸಸ್ಥಾನವನ್ನು ಆಕ್ರಮಿಸಿಕೊಳ್ಳುತ್ತಿರುವ ಮನುಷ್ಯ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಹುಲಿದಾಳಿ, ಕರಡಿದಾಳಿ, ಆನೆದಾಳಿ, ಚಿರತೆದಾಳಿ ಅಂತೆಲ್ಲ ಹೇಳುತ್ತೇವಲ್ಲ, ಆ ಪದಪುಂಜ ಸಮಂಜಸವೇ? ಸ್ವಲ್ಪ ಯೋಚಿಸಿ. ಐಎಫ್​ಎಸ್ ಅಧಿಕಾರಿ ಮುದಿತ್ ವರ್ಮಾ X ನಲ್ಲಿ ಮಾಡಿರುವ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ. ಅವರ ವಾಹನಚಾಲಕ ಕಮಲ್​ಗೆ ಆನೆಯೊಂದು ಕಲಿಸಿದ ಜೀವನಪಾಠದ ಬಗ್ಗೆ ಇವರ ಪೋಸ್ಟ್​ ಇದೆ.

ಇದನ್ನೂ ಓದಿ : Viral Optical Illusion: ಮೂರನೇ ನಾಯಿ ಇಲ್ಲಿ ಎಲ್ಲಿದೆ, 7 ಸೆಕೆಂಡುಗಳಲ್ಲಿ ಕಂಡುಹಿಡಿಯಿರಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಕಳೆದ ವರ್ಷ ಆನೆ ತನ್ನ ಮನೆಯನ್ನು ಹೇಗೆ ಧ್ವಂಸ ಮಾಡಿತು ಎಂದು ನಮ್ಮ ಚಾಲಕ ಕಮಲ್ ಹೇಳುತ್ತಿದ್ದರು. ಅವರು ಹೇಳುತ್ತಿರುವುದನ್ನು ಕೇಳಿ ನಾನಂತೂ ಅಚ್ಚರಿಗೊಂಡೆ; ”ನನ್ನ ಮನೆಯಲ್ಲಿ ಬಾಳೆಗೊಂಚಲು ಇಡದಿದ್ದರೆ ಅದು ಬರುತ್ತಿರಲಿಲ್ಲ. ತಪ್ಪು ನನ್ನದೇ. ಆದರೂ ಒಂದು ವರ್ಷದಿಂದ ನಾವಿಬ್ಬರೂ ಪ್ರೀತಿ ಮತ್ತು ಸಹಬಾಳ್ವೆಯನ್ನು ಕಲಿಯಲು ಪ್ರಯತ್ನಿಸುತ್ತಿದ್ದೇವೆ”. ಈ ಪೋಸ್ಟ್ ಅನ್ನು ಅಕ್ಟೋಬರ್ 2 ರಂದು ಹಂಚಿಕೊಳ್ಳಲಾಗಿದೆ.

ವರ್ಮಾ ವಾಹನ ಚಾಲಕ ಕಮಲ್

ಇದರಲ್ಲಿ ಪ್ರೀತಿ ಮತ್ತು ಸಹಬಾಳ್ವೆಯ ಅಂಶ ಎಲ್ಲಿದೆ? ಎಂದು ಕೇಳಿದ್ಧಾರೆ ಒಬ್ಬರು. ನಿಮ್ಮ ಮನೆಯ ಕಾಂಪೌಂಡಿನಲ್ಲಿ ಹಲಸಿನ ಮರವಿದ್ದರೆ ಆ ಪರಿಮಳ ಮೈಲಿಗಟ್ಟಲೆ ಪಸರಿಸುತ್ತದೆ ಎಂದಿದ್ಧಾರೆ ಇನ್ನೊಬ್ಬರು. ಅಂದರೆ ಮನೆಯೊಳಗೆ ಇಡದೇ ಮನೆಯ ಹೊರಗೆ ಬಾಳೆಗೊನೆ ಇಡಬೇಕಿತ್ತು ಎಂದು ಕಮಲ್ ಹೇಳಿದ್ದಾರಾ, ಹೇಗೆ? ಎಂದು ಕೇಳಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಅಪ್ಸರಾ ಆಲಿ: ‘ನಟರಂಗ’ದ ಅಪ್ಸರೆಯನ್ನು ಕರೆತಂದ ಆವಂತಿ ನಾಗರಾಳ ಮತ್ತು ಸಾಯೀ ಗೋಡ್ಬೋಲೆ

ಆನೆ ಹೀಗೆ ಅರಣ್ಯ ಸಿಬ್ಬಂದಿಯ ಮನೆಯನ್ನು ಹಾಳುಗೆಡವಿದ್ದು ಇದು ಮೊದಲೇನಲ್ಲ. ಈ ಹಿಂದೆ ಐಎಫ್‌ಎಸ್ ಪರ್ವೀನ್ ಕಸ್ವಾನ್ ಹಂಚಿಕೊಂಡ ಪೋಸ್ಟ್​ ನೆನಪಿರಬಹುದು. ಆನೆಯೊಂದು ಕಾರನ್ನು ಧ್ವಂಸಗೊಳಿಸಿ ಓಡಿಹೋಗಿತ್ತು!

ನೀವೇನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್