AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್​ ಸೆರೆಹಿಡಿದ ಮೌಂಟ್ ಎವರೆಸ್ಟ್​ನ ಮನಮೋಹಕ ದೃಶ್ಯ, ಹರ್ಷ ಗೋಯೆಂಕಾ ಹಂಚಿಕೊಂಡ ಈ ವಿಡಿಯೋ ನೋಡಿ

Mount Everest : ಮೌಂಟ್​ ಎವರೆಸ್ಟ್​ಗೆ ಹೋಗದಿದ್ದರೇನಂತೆ, ನೀವಿದ್ದಲ್ಲೇ ಅದರ ದೃಶ್ಯವೈಭವವನ್ನು ನೋಡಿ ಆಹ್ಲಾದಿಸಬಹುದು. ಡ್ರೋನ್​ ಕ್ಯಾಮೆರಾದ ಈ ಅದ್ಭುತ ದೃಶ್ಯಗಳು ನಿಮ್ಮ ಮನಸೆಳೆಯುವಲ್ಲಿ ಎರಡು ಮಾತಿಲ್ಲ.

ಡ್ರೋನ್​ ಸೆರೆಹಿಡಿದ ಮೌಂಟ್ ಎವರೆಸ್ಟ್​ನ ಮನಮೋಹಕ ದೃಶ್ಯ, ಹರ್ಷ ಗೋಯೆಂಕಾ ಹಂಚಿಕೊಂಡ ಈ ವಿಡಿಯೋ ನೋಡಿ
ಮೌಂಟ್​ ಎವರೆಸ್ಟ್​ನ ಹಿಮರಾಶಿ
TV9 Web
| Edited By: |

Updated on: Oct 01, 2022 | 2:53 PM

Share

Viral Video : ಇವು ಮೌಂಟ್ ಎವರೆಸ್ಟ್​ನ ನಯನಮನೋಹರ ದೃಶ್ಯಗಳು. ನೋಡುತ್ತಿದ್ದಂತೆ ಮೈಯೆಲ್ಲ ನವಿರೇಳುತ್ತದೆ. ಹಿಮಾಚ್ಛಾದಿತ ಪರ್ವತಗಳು, ಚಲಿಸುವ ಮೋಡಗಳು ಸ್ವರ್ಗವೆಂದರೆ ಇದೇ ಇರಬೇಕು ಎನ್ನಿಸದೇ ಇರದು. @8kraw_official ಈ ಪ್ರಾಜೆಕ್ಟ್​ನಲ್ಲಿ ಭಾಗಿಯಾಗಿದೆ. ಪರ್ವತದ ಅದ್ಭುತ ಸೌಂದರ್ಯ ಮತ್ತು ಅದರ ಸುತ್ತಮುತ್ತಲಿನ ಅನನ್ಯ ಸೊಬಗನ್ನು ಡ್ರೋನ್​ ಮೂಲಕ ಸೆರೆಹಿಡಿಯಲಾಗಿದೆ. ಆಗಸ್ಟ್​ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಉದ್ಯಮಿ ಹರ್ಷ್ ಗೋಯೆಂಕಾ  ವಿಡಿಯೋ ಅನ್ನು ಟ್ವಿಟರ್​ನಲ್ಲಿ ಮರುಹಂಚಿಕೆ ಮಾಡಿಕೊಂಡಿದ್ದಾರೆ. ‘ಡ್ರೋನ್‌ನಿಂದ ಸೆರೆಹಿಡಿಯಲಾದ ಮೌಂಟ್ ಎವರೆಸ್ಟ್‌ನ ಈ ಅದ್ಭುತ ದೃಶ್ಯಗಳು’ ಎಂಬ ಶೀರ್ಷಿಕೆ ಇದಕ್ಕಿದೆ. 

ಈತನಕ ಈ ವಿಡಿಯೋ ಸುಮಾರು 72,000 ವೀಕ್ಷಕರನ್ನು ತಲುಪಿದೆ. ಸುಮಾರು 2,400 ಲೈಕ್‌ಗಳನ್ನು ಇದು ಗಳಿಸಿದೆ. ಈ ವಿಡಿಯೋ ಅನ್ನು ನೋಡಿದ ಟ್ವಿಟರ್​ ಖಾತೆದಾರರು ಅನೇಕ ರೀತಿಯಲ್ಲಿ ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ‘ಉಸಿರು’ ಎಂದು ಒಬ್ಬರು ಹೇಳಿದ್ದಾರೆ. ಎಂಥ ಅದ್ಭುತ ದೃಶ್ಯಗಳು ಇವು, ಹೊಸ ತಂತ್ರಜ್ಞಾನದ ಅನ್ವೇಷಣೆಯಿಂದ ಇದೆಲ್ಲ ಸಾಧ್ಯವಾಗಿದೆ ಎಂದಿದ್ದಾರೆ ಮತ್ತೊಬ್ಬರು.

ಹೀಗಿಲ್ಲಿ ಈ ದೃಶ್ಯವೈಭವವನ್ನು ನೋಡುತ್ತಿದ್ದರೆ ಮನಸ್ಸು ಎಷ್ಟೊಂದು ಪ್ರಫುಲ್ಲಿತಗೊಳ್ಳುತ್ತದಲ್ಲ!

ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ