AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಮ್ಮರ್ ಆನೆ; ಸೊಂಡಿಲಿನಿಂದ ಡ್ರಮ್ ನುಡಿಸುತ್ತಿರುವ ಆನೆಯ ವಿಡಿಯೋ ವೈರಲ್

Elephant : ಈ ಆನೆಯು ಕಾಡಿನಲ್ಲಿ ತನ್ನದೇ ಆದ ಬ್ಯಾಂಡ್​ ಶುರು ಮಾಡಬೇಕು. ಇಂತಿಂಥ ಪ್ರಾಣಿಗಳೆಲ್ಲ ಇದರ ಬ್ಯಾಂಡ್ ಸೇರಬೇಕು. ಪ್ರದರ್ಶನಕ್ಕೆ ನಾನಂತೂ ಹಣ ಕೊಟ್ಟೇ ಹೋಗುತ್ತೇನೆ ಎನ್ನುತ್ತಿದ್ದಾರೆ ನೆಟ್ಟಿಗರು. ನೀವೇನಂತೀರಿ?

ಡ್ರಮ್ಮರ್ ಆನೆ; ಸೊಂಡಿಲಿನಿಂದ ಡ್ರಮ್ ನುಡಿಸುತ್ತಿರುವ ಆನೆಯ ವಿಡಿಯೋ ವೈರಲ್
ಸೊಂಡಿಲಿನಿಂದ ಡ್ರಮ್​ ನುಡಿಸುತ್ತಿರುವ ಆನೆ
TV9 Web
| Edited By: |

Updated on:Nov 24, 2022 | 1:27 PM

Share

Viral Video : ಆಗಾಗ ಆನೆಗಳ ವೈರಲ್ ವಿಡಿಯೋ ನೋಡುತ್ತಿರುತ್ತೀರಿ. ಅಷ್ಟೇ ಬಲಶಾಲಿ ಅಷ್ಟೇ ಚುರುಕಾಗಿರುವ ಆನೆ ಬುದ್ಧಿವಂತಿಕೆಗೂ ಹೆಸರಾದ ಪ್ರಾಣಿ. ಮನುಷ್ಯನನ್ನು ಅನುಕರಿಸುವಲ್ಲಿ ಇವುಗಳು ಎತ್ತಿದ ಕೈ. ಆನೆಗಳು ಪೇಂಟ್ ಮಾಡುವ ವಿಡಿಯೋ ನೋಡಿದ್ದೀರಿ. ಚೆಂಡಾಟವಾಡುವ ವಿಡಿಯೋ ನೋಡಿದ್ದೀರಿ, ಮೊಬೈಲ್​ನಲ್ಲಿ ಇಣುಕುವ ಆನೆಯ ವಿಡಿಯೋ ನೋಡಿದ್ದೀರಿ.  ಈಗ ವೈರಲ್ ಆದ ಈ ವಿಡಿಯೋ ನೋಡಿ, ಡ್ರಮ್ ಕಲಾವಿದರನೊಬ್ಬ ತನ್ನ ಪಾಡಿಗೆ ತಾನು ನುಡಿಸುತ್ತ ಕುಳಿತಿದ್ದಾನೆ. ಅಲ್ಲಿಗೆ ಬಂದ ಆನೆ ತಾನೂ ನುಡಿಸುವಲ್ಲಿ ಆಸಕ್ತಿ ತೋರಿ ತನ್ನ ಸೊಂಡಿಯನ್ನು ಬೇಲಿಯೊಳಗಿಂದ ಚಾಚಿದೆ.

ಎರಿಕ್ ಸ್ಕಿಫರ್ ಎಂಬುವವರು ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದಾರೆ. ಸೊಂಡಿಲಿನಿಂದ ನುಡಿಸಲು ಪ್ರಯತ್ನಿಸುತ್ತದೆ, ಅದೂ ಲಯಬದ್ಧವಾಗಿ. ನಂತರ ಅದಕ್ಕೆ ಸ್ಟಿಕ್ ಬೇಕೆನ್ನಿಸುತ್ತದೆ ಎನ್ನಿಸುತ್ತದೆ. ಸ್ಟಿಕ್​ಗಾಗಿ ಸೊಂಡಿಲು ಚಾಚಿದ್ದನ್ನು ಗಮನಿಸಬಹುದು. ಸುಮಾರು 50,000 ಜನರಿಂದ ಈ ವಿಡಿಯೋ ಆಕರ್ಷಿಸಲ್ಪಟ್ಟಿದೆ.

ಈ ಆನೆಯು ಕಾಡಿನಲ್ಲಿ ತನ್ನದೇ ಆದ ಬ್ಯಾಂಡ್​ ಶುರು ಮಾಡಬೇಕು ಎಂದು ಅನೇಕರು ಅಭಿಪ್ರಾಯಿಸಿದ್ದಾರೆ. ಇನ್ನೂ ಅನೇಕರು ಆನೆಯ ಬ್ಯಾಂಡ್​ಗೆ ಯಾವ್ಯಾವ ಪ್ರಾಣಿಗಳ ಹೆಸರನ್ನು ಸೇರಿಸಬೇಕು ಎಂದು ಪಟ್ಟಿ ಮಾಡಿದ್ದಾರೆ. ಆನೆಯ ಬ್ಯಾಂಡ್​ ಪ್ರದರ್ಶನ ನೀಡಿದರೆ ನಾನಂತೂ ಖಂಡಿತ ಹಣ ಕೊಟ್ಟು ನೋಡುತ್ತೇನೆ ಎಂದ್ದಾರೆ ಇನ್ನೂ ಒಬ್ಬರು. ನಂತರ ಯಾರಾದರೂ ಈ ಕಲಾವಿದ ಆನೆ ಬಗ್ಗೆ ಡಾಕ್ಯುಮೆಂಟರಿ ಮಾಡಿದರೆ ನಾನು ನೆಟ್​ಫ್ಲಿಕ್ಸ್​ನಲ್ಲಿ ನೋಡಲು ಇಚ್ಛಿಸುತ್ತೇನೆ ಎಂದಿದ್ಧಾರೆ ಮಗದೊಬ್ಬರು. ಇಡೀ ಕಾಡಿನಲ್ಲಿಯೇ ಇದು ಮುದ್ದಾದ ಕೂಸು ಎಂದಿದ್ದಾರೆ ಇನ್ನೂ ಒಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Thu, 24 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್