AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
Follow us
TV9 Web
| Updated By: shruti hegde

Updated on:Jun 29, 2021 | 3:22 PM

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್