AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
TV9 Web
| Edited By: |

Updated on:Jun 29, 2021 | 3:22 PM

Share

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ