AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

Shocking Video: ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು.

ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು
ಭೀಕರ ಅಪಘಾತ
TV9 Web
| Edited By: |

Updated on:Jun 29, 2021 | 3:22 PM

Share

ಅಪಘಾತಗಳು ಅಂದಾಕ್ಷಣ ಒಮ್ಮೆಲೆ ಮೈ ಜುಂ.. ಅನ್ನುತ್ತದೆ. ಒಂದು ಕ್ಷಣದಲ್ಲಿ ವಾಹನಗಳ ಅಪಘಾತವು ಜೀವವನ್ನೇ ಕಿತ್ತುಕೊಂಡು ಬಿಡುತ್ತದೆ. ಯಾರೋ ಒಬ್ಬರ ಅಜಾಗರೂಕತೆಯು ಇನ್ನೊಬ್ಬರ ಜೀವವನ್ನೇ ಕಿತ್ತುಕೊಂಡ ಘಟನೆಯನ್ನು ನಾವು ಕೇಳಿದ್ದೇವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತಿಗೆ ಸರಿಯಾಗಿ ಜೂನ್​ 27ರ ಬೆಳಿಗ್ಗೆ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ವೇಗವಾಗಿ ಹಾಗೂ ಮದ್ಯಸೇವಿಸಿ  ವಾಹನಗಳನ್ನು ಓಡಿಸುವುದು ಅಪಘಾತಕ್ಕೆ ಕಾರಣವಾಗಬಹುದು. ನಿರ್ಲಕ್ಷ್ಯದಿಂದ ವಾಹನ ಓಡಿಸುವುದು ಇನ್ನೊಬ್ಬರಿಗೆ ಹಾನಿಯುಂಟು ಮಾಡಬಹುದು. ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದು ಆಘಾತವನ್ನುಂಟು ಮಾಡಿದೆ. ಪ್ರಯಾಣಿಕನ ಜೀವವನ್ನೇ ಕಿತ್ತುಕೊಂಡಿದೆ. ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ ಘಟನೆ ಬೆಳಕಿಗೆ ಬಂದಿದೆ.

ಜೋರಾದ ಮಳೆಯ ಅರ್ಭಟ. ಈ ಮಧ್ಯೆ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಆಟೋ ರಿಕ್ಷಾ ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಆಟೋ ರಿಕ್ಷಾ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ತಿರುಗಿ ತಿರುಗಿ ಬಿದ್ದಿರುವ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ಆಟೋ ಚಾಲಕ ಗಂಭೀರಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

Published On - 3:18 pm, Tue, 29 June 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್