AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್

ಕಂಠಪೂರ್ತಿ ಕುಡಿದಿದ್ದ ವ್ಯಕ್ತಿಯೋರ್ವ ಚರಂಡಿಯಲ್ಲಿ ಬಿದ್ದು ಹೊರಬರಲಾಗದೆ ಒದ್ದಾಡುತ್ತಿದ್ದ. ಅಲ್ಲಿಗೆ ಬಂದ ಪೊಲೀಸರು ಚರಂಡಿಯಲ್ಲಿ ವೇಗವಾಗಿ ಹರಿಯುವ ಕೊಳಕು ನೀರಿನಿಂದ ಆ ವ್ಯಕ್ತಿಯನ್ನು ಕೊಚ್ಚಿ ಹೋಗುತ್ತಿರುವುದನ್ನು ನೋಡಿದ ಪೊಲೀಸರು ಆತನನ್ನು ಕಾಪಾಡಿದ್ದಾರೆ.

Viral Video: ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್
ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು
ಸುಷ್ಮಾ ಚಕ್ರೆ
|

Updated on: Jul 10, 2024 | 4:46 PM

Share

ನೊಯ್ಡಾ: ಕರ್ತವ್ಯದಲ್ಲಿ ಅದ್ಭುತವಾದ ಸಮರ್ಪಣಾ ಪ್ರಜ್ಞೆಯನ್ನು ಪ್ರದರ್ಶಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ಕುಡುಕನೊಬ್ಬನನ್ನು ಕಾಪಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ವ್ಯಕ್ತಿ ತನ್ನ ಜೀವವನ್ನು ಅಂತ್ಯಗೊಳಿಸಲು ಪ್ರಯತ್ನಿಸುತ್ತಿದ್ದ. ಆತನನ್ನು ರಕ್ಷಿಸಲು ಪೊಲೀಸರು ಆಳವಾದ ಚರಂಡಿಗೆ ಹಾರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕುಡುಕ ಚರಂಡಿಗೆ ಬಿದ್ದಿದ್ದಾನೆ. ನೊಯ್ಡಾ ಪೋಲೀಸರು ಚರಂಡಿಯೊಳಗೆ ಹಾರಿ ಅವನನ್ನು ಎಳೆದಿದ್ದಾರೆ. ಕುಡುಕನನ್ನು ಕಾಪಾಡಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ನನ್ನು ಸೋಹನ್‌ವೀರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ಸ್ಥಳೀಯ ಪಂಚಶೀಲ ಹೊರಠಾಣೆಯ ಉಸ್ತುವಾರಿ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ಥಳಿಸಿ ಕೊಂದ ಜನರು; ಶಾಕಿಂಗ್ ವಿಡಿಯೋ ವೈರಲ್

ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಶಹೀದ್ ಭಗತ್ ಸಿಂಗ್ ರಸ್ತೆಯ ಬಳಿ ಆಳವಾದ ಮತ್ತು ಕೊಳಕು ಚರಂಡಿಗೆ ಬಿದ್ದಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿತು. ಆ ಫೋನ್​ಗೆ ತ್ವರಿತವಾಗಿ ಪ್ರತಿಕ್ರಿಯಿಸಿದ ಸಬ್ ಇನ್ಸ್‌ಪೆಕ್ಟರ್ ಸೋಹನ್‌ವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್ ನವನೀತ್ ಕುಮಾರ್ ಮತ್ತು ಹೆಡ್ ಕಾನ್‌ಸ್ಟೆಬಲ್ ಪ್ರದೀಪ್ ಕುಮಾರ್ ಅವರೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಆ ಚರಂಡಿಯಲ್ಲಿ ವೇಗವಾಗಿ ಹರಿಯುವ ಕೊಳಕು ನೀರಿನಿಂದ ಆ ವ್ಯಕ್ತಿ ತೇಲಿ ಹೋಗುತ್ತಿರುವುದನ್ನು ನೋಡಿದ ಅವರು ಆತನನ್ನು ಕಾಪಾಡಿದರು. “ಅದ್ಭುತ ಶೌರ್ಯವನ್ನು ಪ್ರದರ್ಶಿಸಿದ ಸಿಂಗ್ ಚರಂಡಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಆ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ