Viral Video: ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್

ಕಂಠಪೂರ್ತಿ ಕುಡಿದಿದ್ದ ವ್ಯಕ್ತಿಯೋರ್ವ ಚರಂಡಿಯಲ್ಲಿ ಬಿದ್ದು ಹೊರಬರಲಾಗದೆ ಒದ್ದಾಡುತ್ತಿದ್ದ. ಅಲ್ಲಿಗೆ ಬಂದ ಪೊಲೀಸರು ಚರಂಡಿಯಲ್ಲಿ ವೇಗವಾಗಿ ಹರಿಯುವ ಕೊಳಕು ನೀರಿನಿಂದ ಆ ವ್ಯಕ್ತಿಯನ್ನು ಕೊಚ್ಚಿ ಹೋಗುತ್ತಿರುವುದನ್ನು ನೋಡಿದ ಪೊಲೀಸರು ಆತನನ್ನು ಕಾಪಾಡಿದ್ದಾರೆ.

Viral Video: ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್
ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು
Follow us
|

Updated on: Jul 10, 2024 | 4:46 PM

ನೊಯ್ಡಾ: ಕರ್ತವ್ಯದಲ್ಲಿ ಅದ್ಭುತವಾದ ಸಮರ್ಪಣಾ ಪ್ರಜ್ಞೆಯನ್ನು ಪ್ರದರ್ಶಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ಕುಡುಕನೊಬ್ಬನನ್ನು ಕಾಪಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ವ್ಯಕ್ತಿ ತನ್ನ ಜೀವವನ್ನು ಅಂತ್ಯಗೊಳಿಸಲು ಪ್ರಯತ್ನಿಸುತ್ತಿದ್ದ. ಆತನನ್ನು ರಕ್ಷಿಸಲು ಪೊಲೀಸರು ಆಳವಾದ ಚರಂಡಿಗೆ ಹಾರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕುಡುಕ ಚರಂಡಿಗೆ ಬಿದ್ದಿದ್ದಾನೆ. ನೊಯ್ಡಾ ಪೋಲೀಸರು ಚರಂಡಿಯೊಳಗೆ ಹಾರಿ ಅವನನ್ನು ಎಳೆದಿದ್ದಾರೆ. ಕುಡುಕನನ್ನು ಕಾಪಾಡಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ನನ್ನು ಸೋಹನ್‌ವೀರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ಸ್ಥಳೀಯ ಪಂಚಶೀಲ ಹೊರಠಾಣೆಯ ಉಸ್ತುವಾರಿ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ವ್ಯಕ್ತಿಯನ್ನು ಥಳಿಸಿ ಕೊಂದ ಜನರು; ಶಾಕಿಂಗ್ ವಿಡಿಯೋ ವೈರಲ್

ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಶಹೀದ್ ಭಗತ್ ಸಿಂಗ್ ರಸ್ತೆಯ ಬಳಿ ಆಳವಾದ ಮತ್ತು ಕೊಳಕು ಚರಂಡಿಗೆ ಬಿದ್ದಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿತು. ಆ ಫೋನ್​ಗೆ ತ್ವರಿತವಾಗಿ ಪ್ರತಿಕ್ರಿಯಿಸಿದ ಸಬ್ ಇನ್ಸ್‌ಪೆಕ್ಟರ್ ಸೋಹನ್‌ವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್ ನವನೀತ್ ಕುಮಾರ್ ಮತ್ತು ಹೆಡ್ ಕಾನ್‌ಸ್ಟೆಬಲ್ ಪ್ರದೀಪ್ ಕುಮಾರ್ ಅವರೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಆ ಚರಂಡಿಯಲ್ಲಿ ವೇಗವಾಗಿ ಹರಿಯುವ ಕೊಳಕು ನೀರಿನಿಂದ ಆ ವ್ಯಕ್ತಿ ತೇಲಿ ಹೋಗುತ್ತಿರುವುದನ್ನು ನೋಡಿದ ಅವರು ಆತನನ್ನು ಕಾಪಾಡಿದರು. “ಅದ್ಭುತ ಶೌರ್ಯವನ್ನು ಪ್ರದರ್ಶಿಸಿದ ಸಿಂಗ್ ಚರಂಡಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಆ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ