AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನಾಯಿ ಕದಿಯಲು ಬಂದಿದ್ದ ಎಂದು ವ್ಯಕ್ತಿಯೊಬ್ಬರನ್ನು ಅದರದ್ದೇ ಗೂಡಿನಲ್ಲಿ ಬಂಧಿಸಿದ ಬಾರ್ ಸಿಬ್ಬಂದಿ

ವಿಜಯಪುರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪಾನಮತ್ತ ವ್ಯಕ್ತಿಯೊಬ್ಬ ಆ ಬಾರ್​​​ನ ಸಾಕು ನಾಯಿಯನ್ನು ಕದಿಯಲು ಯತ್ನಿಸಿದ  ಎಂಬ ಕಾರಣಕ್ಕೆ ಬಾರ್ ಸಿಬ್ಬಂದಿ ಆತನನ್ನು ಥಳಿಸಿ, ನಂತರ ನಾಯಿ ಗೂಡಿನಲ್ಲಿ ಹಾಕಿ ಬಂಧಿಸಿದ್ದಾನೆ. ಈ ಘಟನೆಯ ವಿರುದ್ಧ ಇದೀಗ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Viral News: ನಾಯಿ ಕದಿಯಲು ಬಂದಿದ್ದ ಎಂದು ವ್ಯಕ್ತಿಯೊಬ್ಬರನ್ನು ಅದರದ್ದೇ ಗೂಡಿನಲ್ಲಿ ಬಂಧಿಸಿದ ಬಾರ್ ಸಿಬ್ಬಂದಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 21, 2024 | 3:27 PM

Share

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಎಂಬುದೇ ಸತ್ತು ಹೋಗಿದೆ. ಸಣ್ಣಪುಟ್ಟ ವಿಚಾರಕ್ಕೆ ಕೊಲೆ ಮಾಡುವುದು, ಬಟ್ಟೆ ಹರಿದು ಹಲ್ಲೆ ನಡೆಸುವುದು, ಬೀಡಾಡಿ ಪ್ರಾಣಿಗಳಿಗೆ ವಿಷ ನೀಡಿ ಕೊಲ್ಲುವುದು ಇಂತಹ ಹಲವಾರು ಅಮಾನವೀಯ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಸದ್ಯ ಅಂತಹದ್ದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಕು ನಾಯಿಯನ್ನು ಕದಿಯಲು ಯತ್ನಿಸಿದ್ದಾನೆ ಎಂಬ ಕಾರಣಕ್ಕೆ ಬಾರ್ ಸಿಬ್ಬಂದಿಯು ಪಾನಮತ್ತ ವ್ಯಕ್ತಿಗೆ ಥಳಿಸಿದ್ದು ಮಾತ್ರವಲ್ಲದೆ, ಆತನನ್ನು ಪಂಜರದಲ್ಲಿ ಬಂಧಿಸಿ ಅಮಾನವೀಯ ಕೃತ್ಯ ಮೆರೆದಿದ್ದಾನೆ.

ಈ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದ್ದು, ಅಲ್ಲಿನ ಬಬಲೇಶ್ವರ ರಸ್ತೆಯಲ್ಲಿರುವ ಸಾಯಿ ಪ್ರಭಾತ್ ಬಾರ್ ನ ಸಿಬ್ಬಂದಿ ಕುಡಿದ ಮತ್ತಿನಲ್ಲಿ ಬಾರ್​​​ನ ಸಾಕು ನಾಯಿಯನ್ನು   ಕದ್ದುಕೊಂಡು ಹೋಗಿದ್ದಾನೆ ಎಂಬ ಕಾರಣಕ್ಕೆ ಪಾನಮತ್ತ ವ್ಯಕ್ತಿಯನ್ನು ನಾಯಿ ಗೂಡಿನಲ್ಲಿ ಬಂಧಿಸಿ ಶಿಕ್ಷಿಸಿದ್ದಾನೆ.

ಬಾರ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ವ್ಯಕ್ತಿಯನ್ನು ಸೋಮು ಎಂದು ಗುರುತಿಸಲಾಗಿದೆ. ಮದ್ಯದಂಗಡಿಗೆ ಬಂದು ಅಲ್ಲಿ ಸಿಕ್ಕಾಪಟ್ಟೆ ಕುಡಿದು ಟೈಟ್ ಆಗಿ ಬಾರ್​​​​ನ ಸಾಕು ನಾಯಿಯನ್ನು ಕದ್ದುಕೊಂಡು ಹೋಗಲು ಯತ್ನಿಸಿದ್ದಾನೆ ಎಂದು ಬಾರ್ ಸಿಬ್ಬಂದಿ ಸೋಮುವನ್ನು ಎಳೆದುಕೊಂಡು ಬಂದು ಆತನನಿಗೆ ಅಮಾನುಷವಾಗಿ ಥಳಿಸಿದ್ದು ಮಾತ್ರವಲ್ಲದೆ, ಆತನನ್ನು ಕೆಲವು ಗಂಟೆಗಳ ಕಾಲ ನಾಯಿ ಗೂಡಿನಲ್ಲಿಯೇ ಬಂಧಿಸಿಟ್ಟಿದ್ದನು.

ಇದನ್ನೂ ಓದಿ: ಕ್ರಿಕೆಟ್ ಪಂದ್ಯದ ವೇಳೆ ಬಸಣ್ಣನ ಗ್ರ್ಯಾಂಡ್​​​​ ಎಂಟ್ರಿ, ಮುಂದೇನಾಯ್ತು ನೋಡಿ

ನಾಯಿ ಮುದ್ದಾಗಿದೆ ಎಂಬ ಕಾರಣಕ್ಕೆ ನಾನು ಆ ಶ್ವಾನವನ್ನು ಎತ್ತಿಕೊಂಡು ಮುದ್ದಾಡಿದ್ದು ಅಷ್ಟೇ, ನಾನು ಯಾವುದೇ ಕಾರಣಕ್ಕೂ ಆ ಶ್ವಾನವನ್ನು ಕಳ್ಳತನ ಮಾಡಲು  ಯತ್ನಿಸಿಲ್ಲ ಎಂದು  ಸೋಮು ಮನವಿ ಮಾಡಿದರೂ, ಬಾರ್ ಸಿಬ್ಬಂದಿ ಆತನಿಗೆ ಅಮಾನುಷವಾಗಿ ಥಳಿಸಿದ್ದಾನೆ. ನಂತರ ಸ್ಥಳೀಯರ ಮನವಿಯ ಮೇರೆಗೆ ಸೋಮುವನ್ನು ನಾಯಿ ಬೋನಿನಿಂದ  ಬಿಡುಗಡೆಗೊಳಿಸಲಾಗಿದೆ. ಈ ಘಟನೆಯಿಂದಾಗಿ ಬೇಸರಗೊಂಡ ಸ್ಥಳೀಯರು ಬಾರ್ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲು ಕಾನೂನು, ಪೊಲೀಸರು ಇದ್ದಾರೆ, ನಿವ್ಯಾಕೆ ಕಾನೂನನ್ನು ಕೈಗೆತ್ತಿಕೊಳ್ಳಬೇಕು, ಹೀಗೆ ಅಮಾನವೀಯ ರೀತಿಯಲ್ಲಿ ವರ್ತಿಸಬೇಕು ಎಂದು ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು