Video: ಹಾವಿನೊಂದಿಗೆ ಚೆಲ್ಲಾಟವಾಡಲು ಹೋಗಿ ಆಸ್ಪತ್ರೆ ಸೇರಿದ ಕುಡುಕ

ಕುಡಿದ ಅಮಲಿನಲ್ಲಿ ಕುಡುಕರು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಹೊಟ್ಟೆಗೆ ಒಂದಿಷ್ಟು ಸಾರಾಯಿ ಇಳಿದರೆ ಸಾಕು ಕೆಲವರಿಗೆ ತಾವೇನು ಮಾಡ್ತಿದ್ದೇನೆ ಎಂಬುದು ಕೂಡಾ ಅರಿವಿಗೆ ಬರೋಲ್ಲ. ಹೀಗೆ ಕುಡುಕರ ಕಿತಾಪತಿಗೆ ಸಂಬಂಧಿಸಿದ ಸುದ್ದಿಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಕುಡಿದ ಮತ್ತಿನಲ್ಲಿ ಕುಡುಕನೊಬ್ಬ ನಾಗರ ಹಾವಿನ ಜೊತೆ ಆಟವಾಡಲು ಹೋಗಿ ಆಸ್ಪತ್ರೆ ಸೇರಿದ್ದಾನೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Video: ಹಾವಿನೊಂದಿಗೆ ಚೆಲ್ಲಾಟವಾಡಲು ಹೋಗಿ ಆಸ್ಪತ್ರೆ ಸೇರಿದ ಕುಡುಕ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 26, 2024 | 5:57 PM

ಕಂಠಪೂರ್ತಿ ಕುಡಿದು ನಶೆಯಲ್ಲಿ ತೇಲುವ ಕುಡುಕರಿಗೆ ಕೆಲವೊಮ್ಮೆ ತಾವೇನು ಮಾಡುತ್ತಿದ್ದೇವೆ ಎಂಬುದು ಕೂಡಾ ಅರಿವಿಗೆ ಬರೋಲ್ಲ. ಹೀಗೆ ಕುಡುಕರು ನಶೆಯಲ್ಲಿ ತೂರಾಡುತ್ತಾ, ಬೀದಿ ರಂಪ ಮಾಡುವ, ಎಡವಟ್ಟು ಕೆಲಸ ಮಾಡಿ ಪ್ರಾಣಕ್ಕೆ ಕುತ್ತು ತರುವ ಪಜೀತಿಗಳನ್ನು ಮಾಡುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇಲ್ಲೊಬ್ಬ ಕುಡುಕ ಕೂಡಾ ಕುಡಿದ ಅಮಲಿನಲ್ಲಿ ಎಡವಟ್ಟು ಮಾಡಿಕೊಂಡಿದ್ದು, ರಸ್ತೆಯಲ್ಲಿ ಕಾಣಿಸಿಕೊಂಡ ನಾಗರ ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಕೊನೆಯಲ್ಲಿ ಆತ ಆಸ್ಪತ್ರೆಗೆ ಸೇರಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಇಲ್ಲಿನ ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿಯ ಕಾಲೇಜು ಆವರಣದ ಸಮೀಪ ಕುಡುಕನೊಬ್ಬ ಮದ್ಯದ ಅಮಲಿನಲ್ಲಿ ನಾಗರ ಹಾವಿನ ಜೊತೆ ಆಟವಾಡಲು ಹೋಗಿ, ಆಸ್ಪತ್ರೆ ಸೇರಿದ್ದಾನೆ. ಕುಡುಕ ವ್ಯಕ್ತಿ ನಡೆದುಕೊಂಡು ಬರುತ್ತಿದ್ದ ವೇಳೆ ಸರಸರನೆ ಬಂದ ನಾಗರ ಹಾವೊಂದು ಕಾಲೇಜು ಆವರಣದ ಪೊದೆಯೊಳಗೆ ಹೋಗಲು ಪ್ರಯತ್ನಿಸುತ್ತದೆ. ಇದನ್ನು ಕಂಡ ಕುಡುಕ ಮಹಾಶಯ, ಭಂಡ ಧೈರ್ಯದಿಂದ ಹಾವನ್ನು ಹಿಡಿದು ರಸ್ತೆಗೆ ತಂದು, ಅದರ ಜೊತೆ ಚೆಲ್ಲಾಟವಾಡಿದ್ದಾನೆ. ಸ್ಥಳೀಯರು ಎಚ್ಚರಿಕೆ ನೀಡಿದರೂ ಕೂಡಾ ಹಾವಿಗೆ ತೊಂದರೆ ಕೊಡುವುದನ್ನು ಮಾತ್ರ ಆತ ಬಿಟ್ಟಿಲ್ಲ. ಕೊನೆಗೆ ಈತನ ಕಾಟ ತಾಳಲಾರದೆ ಹಾವು ಆತನಿಗೆ ಕಚ್ಚಿದೆ. ಆ ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಸುಧಾಕರ್‌ (sudhakarudumula) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕುಡಿದ ಅಮಲಿನಲ್ಲಿ ತೂರಾಡುತ್ತಿದ್ದ ಕುಡುಕ ಮಹಾಶಯ ನಾಗರ ಹಾವಿನೊಂದಿಗೆ ಆಟವಾಡುತ್ತಿರುವ ಭಯಾನಕ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಜೋರು ಮಳೆಗೆ ಪುಟ್ಟ ಮಗಳನ್ನು ಹೆಗಲ ಮೇಲೆ ಹೊತ್ತು ಶಾಲೆಗೆ ನಡೆದ ಅಮ್ಮ

ಜುಲೈ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 73 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕುಡುಕರು ತಮ್ಮನ್ನು ತಾವು ಬಾಹುಬಲಿ ಅಂತ ಭಾವಿಸಿದ್ದಾರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾಗರ ಹಾವಿನ ತಾಳ್ಮೆಯನ್ನು ಮೆಚ್ಚಬೇಕುʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್