AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಗಾಜು ಹೊಡೆದು ಕಂಡಕ್ಟರ್‌ ಮೇಲೆ ಹಾವು ಎಸೆದ ಮಹಿಳೆ

ಬಸ್​​ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ಬಸ್ಸಿನ ಗಾಜು ಹೊಡೆದು ಹಾಕಿದ್ದಾಳೆ. ಇದಲ್ಲದೇ ಪ್ರಶ್ನಿಸಿದ ಕಂಡಕ್ಟರ್​ ಮೇಲೆ ತನ್ನ ಬ್ಯಾಗ್​​ನಲ್ಲಿ ಇರಿಸಿದ್ದ ಹಾವನ್ನು ತೆಗೆದು ಬಿಸಾಕಿದ್ದಾಳೆ. ಬಸ್​​​ ಕಂಡಕ್ಟರ್ ಹಾಗೂ ಡ್ರೈವರ್​​ ದೂರಿನ ಆಧಾರದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಗಾಜು ಹೊಡೆದು ಕಂಡಕ್ಟರ್‌ ಮೇಲೆ ಹಾವು ಎಸೆದ ಮಹಿಳೆ
ಕಂಡಕ್ಟರ್‌ ಮೇಲೆ ಹಾವು ಎಸೆದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Aug 10, 2024 | 5:34 PM

Share

ಹೈದರಾಬಾದ್: ಬಸ್​​ ನಿಲ್ಲಿಸದಿದ್ದಕ್ಕೆ ಮಹಿಳೆಯೊಬ್ಬಳು ಬಾಟಲಿಯಿಂದ ಬಸ್​​ ಗಾಜು ಹೊಡೆದು ಬಸ್ ಕಂಡಕ್ಟರ್ ಮೇಲೆ ಹಾವನ್ನು ಎಸೆದ ಘಟನೆ ಹೈದರಾಬಾದ್​​ನ ವಿದ್ಯಾನಗರದಲ್ಲಿ ನಡೆದಿದೆ. ಮಹಿಳೆ ಕುಡಿದ ಮತ್ತಿನಲ್ಲಿದ್ದ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದು, ಆಕೆಯನ್ನು ಬಂಧಿಸಿ ಕರೆದೊಯ್ಯಲಾಗಿದೆ.

ಗುರುವಾರ ಸಂಜೆ ವಿದ್ಯಾನಗರದಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಟಿಜಿಎಸ್‌ಆರ್‌ಟಿಸಿ) ಸೇರಿದ ಬಸ್‌ಗೆ ಮಹಿಳೆ ಮದ್ಯದ ಬಾಟಲಿಯನ್ನು ಎಸೆದಿದ್ದಾಳೆ. ಬಳಿಕ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಬ್ಯಾಗ್‌ನಿಂದ ಹಾವನ್ನು ಹೊರತೆಗೆದು ಆಕೆಯ ಮೇಲೆ ಎಸೆದಿದ್ದಾಳೆ. ಘಟನೆಯ ಕುರಿತು ನಲ್ಲಕುಂಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಟಿಜಿಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ

ವಿದ್ಯಾನಗರ ಸಿಗ್ನಲ್‌ನಲ್ಲಿ ಫ್ರೀ ಲೆಫ್ಟ್‌ನಲ್ಲಿ ಆರ್‌ಟಿಸಿ ಬಸ್ ನಿಲ್ದಾಣವಿಲ್ಲ. ಆದ್ದರಿಂದ ಚಾಲಕ ಬಸ್​​ ನಿಲ್ಲಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ದೂರಿನ ಆಧಾರದ ಮೇಲೆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿ ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆ ಕುಡಿದ ಮತ್ತಿನಲ್ಲಿದ್ದಳು, ಬಸ್ ಚಾಲಕ ವಾಹನ ನಿಲ್ಲಿಸದಿದ್ದಾಗ ಕಂಡಕ್ಟರ್ ಮೇಲೆ ಹಾವನ್ನು ಎಸೆದಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!