Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ

Bike stunt : ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ.

Viral Video : ಬೈಕ್​ ಸ್ಟಂಟ್ ವಿಡಿಯೋ ವೈರಲ್, ಪೊಲೀಸರಿಗೆ ದಂಡ ತೆತ್ತ ಸವಾರ
ಸ್ಟಂಟ್ ಮಾಡಿ ದಂಡ ತೆತ್ತ ವೀರ
Follow us
| Updated By: ಶ್ರೀದೇವಿ ಕಳಸದ

Updated on: Sep 27, 2022 | 11:52 AM

Viral Video : ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ವ್ಯಕ್ತಿ ಎರಡೂ ಕಾಲುಗಳನ್ನು ಒಂದೇಕಡೆ ಇಳಿಬಿಟ್ಟು ಹೆಲ್ಮೆಟ್​ ಹಾಕಿಕೊಳ್ಳದೆ ಬೈಕ್​ ಓಡಿಸುತ್ತಿದ್ದಾನೆ. ಲಕ್ಷಾಂತರ ಜನರು ತನ್ನ ಈ ವಿಡಿಯೋ ನೋಡಿ ಬೆನ್ನುತಟ್ಟುತ್ತಾರೆ ಎಂದು ಕನಸು ಕಾಣುತ್ತಿದ್ದ ಈತನಿಗೆ ಛತ್ತೀಸಗಡದ ಪೊಲೀಸರು ರೂ. 4,200 ದಂಡ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ವಿಷಯವನ್ನು ದುರ್ಗದ ಪೊಲೀಸರು ತಮ್ಮ ಅಧೀಕೃತ ಪುಟದಲ್ಲಿ ಹಂಚಿಕೊಂಡಿದ್ದಾರೆ. ಈತನ ಸ್ಟಂಟ್ ಮಹಾತ್ಮೆ ಮತ್ತು ದಂಡಪುರಾಣವನ್ನು ಈತನಕ 2 ಲಕ್ಷಕ್ಕೂ ಅಧಿಕ ನೆಟ್ಟಿಗರು ನೋಡಿದ್ದಾರೆ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ತಕ್ಕ ಶಿಕ್ಷೆಯಾಗಿದೆ ಎಂದು ಕೆಲವರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನೂ ಕೆಲವರು ಬಹಳ ಅದ್ಭುತವಾದ ಸ್ಟಂಟ್​ ಹೀಗೇ ಮುಂದುವರಿಯಲಿ ಎಂದು ಬೆನ್ನುತಟ್ಟಿದ್ದಾರೆ.

ತನ್ನ ಈ ಸಾಹಸಮಯ ವಿಡಿಯೋ ವೈರಲ್ ಆಗಿ ತಾನು ಖ್ಯಾತಿಗೆ ಬರುತ್ತೇನೆ ಎಂದು ಬೈಕ್​ ಮೇಲೆ ಹಗಲುಗನಸು ಕಾಣುತ್ತಿದ್ದ ವ್ಯಕ್ತಿಗೆ ಅಂತೂ ಪೊಲೀಸರು ಸರಿಯಾಗಿ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಪೊಲೀಸರು ಈತನನ್ನು ಸಂಪರ್ಕಿಸಿದಾಗ ಬಹುಮಾನ ಕೊಡುತ್ತಾರೆಂದು ಊಹಿಸಿದ್ದನೋ ಏನೋ!

ಒಬ್ಬರ ಸಾಹಸ ಇನ್ನೊಬ್ಬರಿಗೆ ಅಪಾಯ ತರದಂತಿರಬೇಕು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು