AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ

ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Video Viral: ಬೆಂಗಳೂರಿನಲ್ಲಿದೆ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್​​​​; ಸೈಕಲ್‌ ಬಳಸಿ ಜ್ಯೂಸ್‌ ತಯಾರಿಕೆ
Eat Raja
ಅಕ್ಷತಾ ವರ್ಕಾಡಿ
|

Updated on: Apr 19, 2024 | 4:05 PM

Share

ಬೆಂಗಳೂರಿನ ಪರಿಸರ ಸ್ನೇಹಿ ‘ಈಟ್‌ ರಾಜ’ (Eat Raja) ಜ್ಯೂಸ್‌ ಅಂಗಡಿ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಇಲ್ಲಿ ಸೈಕಲ್‌ ಬಳಸಿ ಜ್ಯೂಸ್‌ ತಯಾರಿಸಲಾಗುತ್ತದೆ. ಇದಲ್ಲದೇ ಯಾವುದೇ ರೀತಿಯ ಗಾಜಿನ ಗ್ಲಾಸ್‌, ಪ್ಲಾಸ್ಟಿಕ್ ಗ್ಲಾಸ್‌ ಹಾಗೂ ಪ್ಲಾಸ್ಟಿಕ್​ ಸ್ಟ್ರಾಗಳ ಬಳಕೆಯಿಲ್ಲ. ಬದಲಾಗಿ ಜ್ಯೂಸ್​​ ತಯಾರಿಸಿದ ಹಣ್ಣಿನ ತಿರುಳಿನಿಂದಲೇ ಜ್ಯೂಸ್​​ ಸರ್ವ್ ಮಾಡಿಕೊಡಲಾಗುತ್ತದೆ. ಈ ಪರಿಸರ ಸ್ನೇಹಿ ಜ್ಯೂಸ್‌ ಸೆಂಟರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿದೆ.

@ontheground.with.sai ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಪರಿಸರ ಸ್ನೇಹಿ ಜ್ಯೂಸ್‌ ಅಂಗಡಿಯ ವಿಡಿಯೋ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಸೈಕಲ್‌ ಹಿಂದೆ ಮಿಕ್ಸರ್‌ ಜಾರ್‌ವೊಂದನ್ನ ಅಳವಡಿಸಲಾಗಿದ್ದು, ಅದರಲ್ಲಿ ಹಣ್ಣುಗಳನ್ನಿರಿಸಿ ಪೆಡಲ್‌ ಮಾಡಿದರೆ ಜ್ಯೂಸ್‌ ತಯಾರಾಗುತ್ತದೆ. ಇದಲ್ಲದೇ ಹಣ್ಣಿನ ಜ್ಯೂಸ್​​ ಅನ್ನು ಹಣ್ಣಿನ ತಿರುಳಿನಲ್ಲೇ ಸುರಿದು ಸರ್ವ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಸದ್ಯ ಏಪ್ರಿಲ್​​ 17ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 3ಲಕ್ಷದ 67ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 31ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಗಳೂರಿನ ಪರಿಸರ ಸ್ನೇಹಿ ಜ್ಯೂಸ್​ ಸೆಂಟರ್​ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್