AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇರಲೆಹಣ್ಣು ಮಾರುತ್ತಿದ್ದ ವಯೋವೃದ್ಧೆಗೆ ಸಹಾಯ ಮಾಡಿದ ಪೊಲೀಸ್ ಅಧಿಕಾರಿ; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

Police Officer : ಸಹಾಯ ಮಾಡಿದವರು ತಮ್ಮ ಮುಖ ತೋರಿಲ್ಲ, ಇದೇ ಅವರ ಘನತೆ ಎಂದಿದ್ದಾರೆ ಒಬ್ಬರು. ಹಣವನ್ನಷ್ಟೇ ಕೊಡದೆ, ಹಣ್ಣುಗಳನ್ನು ಖರೀದಿಸಿ ವೃದ್ಧೆಯನ್ನು ಗೌರವಿಸಬೇಕಿತ್ತು ಎಂದಿದ್ದಾರೆ ಇನ್ನೊಬ್ಬರು.

ಪೇರಲೆಹಣ್ಣು ಮಾರುತ್ತಿದ್ದ ವಯೋವೃದ್ಧೆಗೆ ಸಹಾಯ ಮಾಡಿದ ಪೊಲೀಸ್ ಅಧಿಕಾರಿ; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ
ವೃದ್ಧೆಗೆ ಹಣ ನೀಡುತ್ತಿರುವ ದೃಶ್ಯ
TV9 Web
| Updated By: ಶ್ರೀದೇವಿ ಕಳಸದ|

Updated on:Dec 06, 2022 | 5:56 PM

Share

Viral Video : ಒಂದು ಹೊತ್ತಿನ ತುತ್ತಿಗಾಗಿ ಹೀಗೆ ರಸ್ತೆ ಬದಿ, ಇಡೀದಿನ ರಣಬಿಸಿಲಲ್ಲಿ ಏನನ್ನೋ ಮಾರುತ್ತ ಕುಳಿತಿರುವ ಮುಪ್ಪಾನು ಮುದುಕರನ್ನು ನೋಡಿದಾಗ ಕರುಳು ಚುರುಗುಡುತ್ತದೆ. ಈಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ, ವಯೋವೃದ್ಧೆ ಮುಖ್ಯರಸ್ತೆಯೊಂದರ ಬಳಿ ಪೇರಲೆಹಣ್ಣನ್ನು ಮಾರುತ್ತ ಕುಳಿತಿದ್ದಾಳೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಪೊಲೀಸ್​ ಅಧಿಕಾರಿ ಕಾರು ನಿಲ್ಲಿಸುತ್ತಾರೆ. ಇಂಥಾ ಬಿಸಿಲಲ್ಲಿ ಯಾಕೆ ಹೀಗೆ ಮಾರುತ್ತ ಕುಳಿತಿದ್ದೀರಿ? ಈ ನಾಯಿಯೂ ನಿಮ್ಮದೆ? ಎಂದು ಮಾತು ಶುರುಮಾಡುತ್ತಾರೆ ಪೊಲೀಸ್ ಅಧಿಕಾರಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಬುಂದೇಲಿ ಬೌಚ್ಚಾರ್​ ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಮಧ್ಯಪ್ರದೇಶದ ದಮೋಹ್​ನಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಪೊಲೀಸ್ ಅಧಿಕಾರಿಯ ಹೆಸರು ಅವದೇಶ್​ ಕುಮಾರ ದುಬೇ. 3,66,700 ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000ಕ್ಕೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಅನೇಕರು ರೀಟ್ವೀಟ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಸಹಾಯ ಮಾಡಿದವರು ತಮ್ಮ ಮುಖವನ್ನು ತೋರಿಲ್ಲ, ಇದೇ ಅವರ ಘನತೆಯನ್ನು ಸಾರುತ್ತದೆ. ಎಂದಿದ್ದಾರೆ ಒಬ್ಬರು. ಉಚಿತವಾಗಿ ಹಣ ಕೊಡಬಾರದು, ಹಣ್ಣುಗಳನ್ನು ಖರೀದಿಸಿ ಅವರನ್ನು ಗೌರವಿಸಬೇಕಿತ್ತು ಎಂದಿದ್ದಾರೆ ಇನ್ನೊಬ್ಬರು. ಸಹಾಯ ಮಾಡಿದ ಬಗ್ಗೆ ಯಾರಿಗೂ ಹೇಳಬಾರದು ನಿಜ. ಆದರೆ ಪಾತ್ರರಿಗೆ ಸಹಾಯ ಮಾಡಬೇಕು ಎನ್ನುವುದನ್ನು ಹೇಳಲಾದರೂ ವಿಡಿಯೋ ಮಾಡಲೇಬೇಕಾಗುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:42 pm, Tue, 6 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?