ಬೈಕ್ ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ

ಬೈಕ್​​ ಸವಾರನಿಗೆ ಬೈಕ್​ ನಿಧಾನಕ್ಕೆ ಓಡಿಸಪ್ಪಾ ಎಂದಿದ್ದಕ್ಕೆ ವೃದ್ಧನನ್ನು ಒಂದೇ ಏಟಿಗೆ ಕೊಂದು ಹಾಕಿರುವ ಘಟನೆ ಹೈದರಾಬಾದ್‌ನ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

ರಸ್ತೆ ದಾಟುತ್ತಿದ್ದ ವೃದ್ಧನೊರ್ವ ಎದುರಿಗೆ ಬಂದ ಬೈಕ್​​ ಸವಾರನಿಗೆ ಬೈಕ್​ ನಿಧಾನಕ್ಕೆ ಓಡಿಸಪ್ಪಾ ಎಂದಿದ್ದಕ್ಕೆ ಏಕಾಏಕಿ ಬಂದು ಒಂದೇ ಏಟಿಗೆ ವೃದ್ಧನನ್ನು ಕೊಂದು ಹಾಕಿರುವ ಘಟನೆ ಹೈದರಾಬಾದ್‌ನ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೆಪ್ಟೆಂಬರ್ 30ರ ರಾತ್ರಿ ಈ ಘಟನೆ ನಡೆದಿದ್ದು, ಹೊಡೆದ ಏಟಿಗೆ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಗುರುವಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

@jsuryareddy ಎಂಬ ಟ್ವಿಟರ್​ ಖಾತೆಯಲ್ಲಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ಸಿಸಿಟಿವಿ ದೃಶ್ಯಾವಳಿಗಳನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us