AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಈ ವಯಸ್ಸಲ್ಲಿ ಇದೆಲ್ಲಾ ಬೇಕಾ, ಚಲಿಸುತ್ತಿರುವ ರೈಲಿನಲ್ಲಿ ತಾತಪ್ಪನ ಕಸರತ್ತು ಕಂಡು ಸುಸ್ತಾದ ನೆಟ್ಟಿಗರು

ಪುಂಡ ಹುಡುಗರು ಭಂಡ ಧೈರ್ಯ ಮಾಡಿ ಚಲಿಸುತ್ತಿರುವ ರೈಲಿನ ಫುಟ್‌ ಬೋರ್ಡ್‌ ಮೇಲೆ ನೇತಾಡುತ್ತಾ ಅಪಾಯಕಾರಿ ಸ್ಟಂಟ್‌ ಮಾಡುವಂತಹ ವಿಡಿಯೋ ತುಣುಕುಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇಲ್ಲೊಬ್ರು ತಾತಪ್ಪ ಕೂಡಾ ಅವರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ರೈಲಿನಲ್ಲಿ ಸರ್ಕಸ್ಸು ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಮುದುಕನ ಕಸರತ್ತು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

Viral: ಈ ವಯಸ್ಸಲ್ಲಿ ಇದೆಲ್ಲಾ ಬೇಕಾ, ಚಲಿಸುತ್ತಿರುವ ರೈಲಿನಲ್ಲಿ ತಾತಪ್ಪನ ಕಸರತ್ತು ಕಂಡು ಸುಸ್ತಾದ ನೆಟ್ಟಿಗರು
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 01, 2024 | 5:19 PM

ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಫುಟ್‌ಬೋರ್ಡ್‌ ಮೇಲೆ ನಿಂತು ಹುಚ್ಚಾಟ ಮೆರೆಯಬಾರದು ಎಂದು ಎಚ್ಚರಿಕೆ ನೀಡಿದ್ರೂ ಕೂಡಾ ಈ ಕೆಲ ಯುವಕರು ಕ್ಯಾರೇ ಅನ್ನದೆ ರೀಲ್ಸ್‌ ವಿಡಿಯೋ ಮಾಡುವ ಸಲುವಾಗಿ ಪ್ರಾಣವನ್ನೇ ಪಣಕ್ಕಿಟ್ಟು ರೈಲಿನಲ್ಲಿಯೂ ಡೇಂಜರಸ್‌ ಸ್ಟಂಟ್‌ಗಳನ್ನು ಮಾಡುತ್ತಿರುತ್ತಾರೆ. ಇಲ್ಲೊಬ್ರು ತಾತ ಕೂಡಾ ಯುವಕರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ಅವರು ಕೂಡಾ ಚಲಿಸುತ್ತಿರುವ ರೈಲಿನ ಫುಟ್‌ ಬೋರ್ಡ್‌ನಲ್ಲಿ ನೇತಾಡುತ್ತಾ ಕಸರತ್ತು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ವಯಸ್ಸಲ್ಲಿ ಇದೆಲ್ಲಾ ಬೇಕಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

Bigtvtelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರೀಲ್ಸ್‌ಗಾಗಿ ವೃದ್ಧರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿ ಡೇಂಜರಸ್‌ ಸ್ಟಂಟ್‌ ಮಾಡುತ್ತಿರುವ ದೃಶ್ಯವನನ್ನು ಕಾಣಬಹುದು. ವೇಗವಾಗಿ ಚಲಿಸುತ್ತಿದ್ದ ರೈಲಿನ ಫುಟ್‌ಬೋರ್ಡ್‌ ಬಳಿ ನಿಂತಿದ್ದ ತಾತಪ್ಪ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಾ ಯುವಕರೂ ನಾಚುವಂತೆ ಚಿತ್ರ ವಿಚಿತ್ರ ಕಸರತ್ತುಗಳನ್ನು ಮಾಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಸೆಪ್ಟೆಂಬರ್‌ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಲಿಸುತ್ತಿರುವ ರೈಲಿನಲ್ಲಿ ತಾತಪ್ಪ ಯಾವುದೇ ಭಯವಿಲ್ಲದೆ ಸಲೀಸಾಗಿ ಅಪಾಯಕಾರಿ ಸ್ಟಂಟ್‌ ಮಾಡುವ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ