AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ

Tamilnadu : ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇದ್ದರೂ ಚೆನ್ನೈನ ವೃದ್ಧೆ ಮಾತ್ರ 15 ರೂಪಾಯಿ ಕೊಟ್ಟು ಕಂಡಕ್ಟರ್​ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ
ಉಚಿತವಾಗಿ ಪ್ರಯಾಣಿಸಲಾರೆ ಎನ್ನುತ್ತಿರುವ ಹಿರಿಯ ಮಹಿಳೆ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Sep 30, 2022 | 11:36 AM

Share

Viral : ಹಣ ಉಳಿದರೆ ಸಾಕು ಎಂದು ಸೋಗು ಹಾಕಿಕೊಂಡು ಉಚಿತವಾಗಿ ಪ್ರಯಾಣಿಸಲು ನೆಪ ಹುಡುಕುವ ಮತ್ತು ಅರ್ಹತೆ ಇಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ. ಆದರೆ, ತಮಿಳುನಾಡಿನ ಈ ವೃದ್ಧೆ ಮಾತ್ರ ಎಲ್ಲರ ಮಧ್ಯೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ವೃದ್ಧೆ ನಿರಾಕರಿಸಿದ ಸಂಗತಿ ವೈರಲ್ ಆಗಿದೆ. ಮಧುಕರೈ ಮತ್ತು ಪಾಲತುರೈ ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ವೃದ್ದೆ ಕಂಡಕ್ಟರ್ ಜೊತೆ ಸಂಭಾಷಿಸುತ್ತಿರುವ ವಿಡಿಯೋ ಚಿತ್ರೀಕರಿಸಿದ್ದಾರೆ. ಬಸ್ ಟಿಕೆಟ್‌ಗಾಗಿ ಬೇಡಿಕೆ ಇಡುವ ಈ ವೃದ್ಧೆ ಕಂಡಕ್ಟರ್ ಜೊತೆ ಅಕ್ಷರಶಃ ಜಗಳಕ್ಕಿಳಿಸಿದ್ದಾರೆ. ‘ನಾನು ಓಸಿಯಾಗಿ ಓಡಾಡಲು ಇಚ್ಛಿಸುವುದಿಲ್ಲ (ಉಚಿತವಾಗಿ ಪ್ರಯಾಣಿಸುವುದಿಲ್ಲ)’ ಎನ್ನುವುದು ಅವರ ಜಗಳದ ಮುಖ್ಯಾಂಶ.

ಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷವು, ತಮಿಳುನಾಡಿನ ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕಾದ ಅಂಶ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಈ ವೃದ್ಧೆಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಈಕೆ ಅದನ್ನು ನಿರಾಕರಿಸಿ ಟಿಕೆಟ್ ಕೊಡಲೇಬೇಕೆಂದು ಒತ್ತಡ ಹೇರಿದ್ಧಾರೆ.

ಉಪಾಯಗಾಣದ ಕಂಡಕ್ಟರ್ ಕೊನೆಗೆ ಪ್ರಯಾಣ ದರ ರೂ. 15 ಸ್ವೀಕರಿಸಿ ವೃದ್ಧೆಗೆ ಟಿಕೆಟ್​ ನೀಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್