AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ

Tamilnadu : ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಇದ್ದರೂ ಚೆನ್ನೈನ ವೃದ್ಧೆ ಮಾತ್ರ 15 ರೂಪಾಯಿ ಕೊಟ್ಟು ಕಂಡಕ್ಟರ್​ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.

‘ನಾನು ಉಚಿತವಾಗಿ ಪ್ರಯಾಣಿಸಲಾರೆ’ ಬಸ್​ ಕಂಡಕ್ಟರ್​ ಜೊತೆ ಜಗಳಕ್ಕಿಳಿದ ತಮಿಳುನಾಡಿನ ಈ ವೃದ್ಧೆ
ಉಚಿತವಾಗಿ ಪ್ರಯಾಣಿಸಲಾರೆ ಎನ್ನುತ್ತಿರುವ ಹಿರಿಯ ಮಹಿಳೆ
Follow us
ಶ್ರೀದೇವಿ ಕಳಸದ
|

Updated on: Sep 30, 2022 | 11:36 AM

Viral : ಹಣ ಉಳಿದರೆ ಸಾಕು ಎಂದು ಸೋಗು ಹಾಕಿಕೊಂಡು ಉಚಿತವಾಗಿ ಪ್ರಯಾಣಿಸಲು ನೆಪ ಹುಡುಕುವ ಮತ್ತು ಅರ್ಹತೆ ಇಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ. ಆದರೆ, ತಮಿಳುನಾಡಿನ ಈ ವೃದ್ಧೆ ಮಾತ್ರ ಎಲ್ಲರ ಮಧ್ಯೆ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಈ ವೃದ್ಧೆ ನಿರಾಕರಿಸಿದ ಸಂಗತಿ ವೈರಲ್ ಆಗಿದೆ. ಮಧುಕರೈ ಮತ್ತು ಪಾಲತುರೈ ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ವೃದ್ದೆ ಕಂಡಕ್ಟರ್ ಜೊತೆ ಸಂಭಾಷಿಸುತ್ತಿರುವ ವಿಡಿಯೋ ಚಿತ್ರೀಕರಿಸಿದ್ದಾರೆ. ಬಸ್ ಟಿಕೆಟ್‌ಗಾಗಿ ಬೇಡಿಕೆ ಇಡುವ ಈ ವೃದ್ಧೆ ಕಂಡಕ್ಟರ್ ಜೊತೆ ಅಕ್ಷರಶಃ ಜಗಳಕ್ಕಿಳಿಸಿದ್ದಾರೆ. ‘ನಾನು ಓಸಿಯಾಗಿ ಓಡಾಡಲು ಇಚ್ಛಿಸುವುದಿಲ್ಲ (ಉಚಿತವಾಗಿ ಪ್ರಯಾಣಿಸುವುದಿಲ್ಲ)’ ಎನ್ನುವುದು ಅವರ ಜಗಳದ ಮುಖ್ಯಾಂಶ.

ಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷವು, ತಮಿಳುನಾಡಿನ ವೈಟ್​ ಬೋರ್ಡ್​ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕಾದ ಅಂಶ. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಈ ವೃದ್ಧೆಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಈಕೆ ಅದನ್ನು ನಿರಾಕರಿಸಿ ಟಿಕೆಟ್ ಕೊಡಲೇಬೇಕೆಂದು ಒತ್ತಡ ಹೇರಿದ್ಧಾರೆ.

ಉಪಾಯಗಾಣದ ಕಂಡಕ್ಟರ್ ಕೊನೆಗೆ ಪ್ರಯಾಣ ದರ ರೂ. 15 ಸ್ವೀಕರಿಸಿ ವೃದ್ಧೆಗೆ ಟಿಕೆಟ್​ ನೀಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ