AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ‘ಚಾಕೋಲೇಟ್​ ದಾದೀಜೀ’ ಎನ್​ಜಿಒ ಸಹಾಯ ನಿರಾಕರಿಸಿದ ಮುಂಬೈನ ಹಿರಿಯ ಮಹಿಳೆ

Mumbai : ಶಾರ್ಟ್​ಕಟ್​ ರೂಟ್​, ಭ್ರಮೆ ಮತ್ತು ಅನುಕರಣೆಯ ಹಿಂದೆ ಬಿದ್ದಿರುವ ನಮ್ಮ ನಡುವಿನ ಯುವಪೀಳಿಗೆ ದಾದೀಜೀಯಂಥವರ ಸ್ವಾಭಿಮಾನದ ಬದುಕನ್ನು ಕಣ್ಣುತೆರೆದು ನೋಡಬೇಕಿದೆ. 75,000 ನೆಟ್ಟಿಗರು ಈ ಪೋಸ್ಟ್​ ಮೆಚ್ಚಿದ್ದಾರೆ. 

Trending : ‘ಚಾಕೋಲೇಟ್​ ದಾದೀಜೀ’ ಎನ್​ಜಿಒ ಸಹಾಯ ನಿರಾಕರಿಸಿದ ಮುಂಬೈನ ಹಿರಿಯ ಮಹಿಳೆ
ದಾದೀಜಿಯ ಎಲ್ಲಾ ಚಾಕೋಲೇಟನ್ನು ಖರೀದಿಸಿದ ಅಹ್ಲುವಾಲಿಯಾ
TV9 Web
| Edited By: |

Updated on:Sep 09, 2022 | 11:23 AM

Share

Trending : ಮುಂಬೈ ಅದೊಂದು ಮಾಂತ್ರಿಕ ಲೋಕ. ಶ್ರಮಜೀವಿಗಳ ಆಪ್ತ ಜಗತ್ತು. ಅದರಲ್ಲೂ ಲೋಕಲ್​ ರೈಲಿನ ಒಳಹೊಕ್ಕಷ್ಟೂ ಅಚ್ಚರಿಗಳೇ. ದುಡಿಯುವ ಮಹಿಳೆಯರ ಸ್ವಾಭಿಮಾನದ ಮುಖಗಳಿಗಂತೂ ಲೆಕ್ಕವೇ ಇಲ್ಲ.  ಮನಸ್ಸಿದ್ದರೇ ಯಾವ ಕೆಲಸವನ್ನೂ ಮಾಡಿ ಬದುಕಬಲ್ಲೆವು ಎನ್ನುವ ಛಲಹೊತ್ತ ಮಹಿಳೆಯರು ಯಾರನ್ನೂ ಸೆಳೆಯದೆ ಇರಲಾರರು. ಇತ್ತೀಚೆಗೆ ಚಾಕೋಲೇಟ್ ಮಾರುವ ಹಿರಿಯ ಮಹಿಳೆಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ನೀವು ಗಮನಿಸಿರಬಹುದು. ಈ ವಿಡಿಯೋ ನೋಡಿದ ಸ್ವಯಂ ಸೇವಾ ಸಂಸ್ಥೆ  ಈ ಮಹಿಳೆಗೆ ಸಹಾಯ ಮಾಡಬೇಕೆಂದು ಹುಡುಕಾಡಿ ಕೊನೆಗೂ ಭೇಟಿ ಮಾಡಿದೆ. ಆದರೆ ಸ್ವಾಭಿಮಾನಿಯಾದ ಈಕೆ ವಿನಮ್ರವಾಗಿ ಸಹಾಯವನ್ನು ನಿರಾಕರಿಸಿದ್ದಾರೆ. ಈ ಅಪ್​ಡೇಟ್​ವುಳ್ಳ ಪೋಸ್ಟ್ ಇದೀಗ​ ವೈರಲ್ ಆಗುತ್ತಿದ್ದು ನೆಟ್ಟಿಗರು ಈಕೆಯ ನಿರ್ಧಾರವನ್ನು ಗೌರವಿಸಿ ಪ್ರಶಂಸಿಸುತ್ತಿದ್ದಾರೆ.

ಸ್ವಾತಿ ಎನ್ನುವವರು ಟ್ವಿಟರ್​ನಲ್ಲಿ ಈ ಹಿರಿಯ ಮಹಿಳೆ ಚಾಕೋಲೇಟ್​ ಮಾರುವ ವಿಡಿಯೋ ಅನ್ನು ಮೊದಲಿಗೆ ಹಂಚಿಕೊಂಡರು. ತದನಂತರ ಹೇಮಕುಂಟ್​ ಫೌಂಡೇಶನ್​ನ ಹರ್​​ತೀರಥ್​ ಸಿಂಗ್​ ಅಹ್ಲುವಾಲಿಯಾ ಅವರ ಕಣ್ಣಿಗೆ ಈ ಪೋಸ್ಟ್​ ಬೀಳುತ್ತಿದ್ದಂತೆ ಈ ಹಿರಿಯ ಮಹಿಳೆಯನ್ನು ಹುಡುಕಿ, ಅವರ ಬದುಕನ್ನು ಸುಗಮಗೊಳಿಸಬೇಕೆಂದು ಇಚ್ಛಿಸಿ ಸಹಾಯ ಮಾಡಲು ನಿರ್ಧರಿಸಿ ಈ ವಿಷಯವನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದರು. ಅನೇಕರು ಇದನ್ನು ರೀಟ್ವೀಟ್ ಮಾಡಿದರು.

ಈ ರೀಟ್ವೀಟ್​ನ ಹಾದಿಯಲ್ಲಿಯೇ ಈ ಹಿರಿಯ ಮಹಿಳೆಯನ್ನು ನೆಟ್ಟಿಗರು ‘ದಾದೀಜಿ’ ಎಂದು ಕರೆಯಲಾರಂಭಿಸಿದರು. ಕೊನೆಗೂ ಅಹ್ಲುವಾಲಿಯಾ ಅವರು ಈ ದಾದೀಜಿಯನ್ನು ಪತ್ತೆ ಹಚ್ಚಿಯೇ ಬಿಟ್ಟರು. ‘ನಿಮ್ಮ ಸಹಾಯದೊಂದಿಗೆ ದಾದೀಜಿಯನ್ನು 48 ಗಂಟೆಗಳೊಳಗೆ ಹುಡುಕಲು ಸಾಧ್ಯವಾಯಿತು. ಮುಂಬೈನ್​ 12 ಸ್ಥಳೀಯ ರೈಲುಗಳಲ್ಲಿ ನಿರಂತರವಾಗಿ ನಮ್ಮ ತಂಡ ಇವರನ್ನು ಹುಡುಕುವ ಪ್ರಯತ್ನ ಮಾಡಿತು. ಕೊನೆಗೂ ಸಿಕ್ಕರು, ಆದರೆ ದಾದೀಜಿ ತಮಗೆ ಯಾವುದೇ ಹಣಕಾಸಿನ ನೆರವು ಬೇಡವೆಂದು ನಿರಾಕರಿಸಿದರು. ಇದು ನಿಜಕ್ಕೂ ದೊಡ್ಡ ಅಚ್ಚರಿ! ಆಗ ಅವರ ಬಳಿ ಇದ್ದ ಎಲ್ಲ ಚಾಕೋಲೇಟುಗಳನ್ನು ನಾವು ಖರೀದಿಸಿದೆವು’ ಎಂದು ಮತ್ತೊಂದು ಪೋಸ್ಟ್ ಮಾಡಿದರು ಅಹ್ಲುವಾಲಿಯಾ.

ಈ ಪೋಸ್ಟ್​ 75,000 ಕ್ಕೂ ಹೆಚ್ಚು ಲೈಕ್ಸ್​ ಮತ್ತು ನೂರಾರು ಕಮೆಂಟ್​ಗಳ ಸುರಿಮಳೆ ಪಡೆದಿದೆ.

ನಮ್ಮ ನಡುವಿನ ಅನೇಕರು ಪರಿಶ್ರಮದ ಬದುಕನ್ನು ಪ್ರೀತಿಸುತ್ತಾರೆ. ಅದು ಅವರಿಗೆ ಯಾವುದೋ ರೀತಿಯಲ್ಲಿ ಸಮಾಧಾನ, ಆತ್ಮವಿಶ್ವಾಸ, ಆತ್ಮಗೌರವವನ್ನು ತಂದುಕೊಡುತ್ತಿರುತ್ತದೆ. ಶಾರ್ಟ್​ಕಟ್​ ರೂಟ್​, ಭ್ರಮೆ ಮತ್ತು ಅನುಕರಣೆಯ ಹಿಂದೆ ಬಿದ್ದಿರುವ ನಮ್ಮ ನಡುವಿನ ಯುವಪೀಳಿಗೆ ದಾದೀಜಿಯಂಥವರ ಸ್ವಾಭಿಮಾನದ ಬದುಕನ್ನು ಕಣ್ಣುತೆರೆದು ನೋಡಬೇಕಿದೆ.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:40 am, Fri, 9 September 22

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?